News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

348

ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ ನಂಬರ್ ಒಂದು ಹಣ್ಣು ಎಂದರೆ ಬಾಳೆಹಣ್ಣು ಎಂದು ಹೇಳಿದರೆ ಅಚ್ಚರಿಪಡಬೇಕಾಗಿಲ್ಲ. ಸರ್ವಕಾಲದಲ್ಲಿ ಲಭ್ಯ, ಅಗ್ಗ ಹಾಗೂ ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲ ಹಣ್ಣು ಎಂದರೆ ಬಾಳೆಹಣ್ಣು. ಅದರಲ್ಲೂ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನು ಸಾಮಾನ್ಯವಾಗಿ ನೀವು ಬಾಳೆಹಣ್ಣನ್ನು ತಿನ್ನುವಾಗ ಅದರ ಸಿಪ್ಪೆ ಮೇಲೆ ಚುಕ್ಕೆಗಳನ್ನು ನೋಡಿರಬಹುದು, ಈ ಸಿಪ್ಪೆಗಳು ಹೇಗೆ ನಮ್ಮ ಆರೋಗ್ಯಕ್ಕೆ ಲಾಭಕಾರಕ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ, ಹಾಗಾದರೆ ಚುಕ್ಕೆ ಇರುವ ಬಾಳೆ ಹಣ್ಣು ನಮ್ಮ ದೇಹಕ್ಕೆ ಹೇಗೆ ಆರೋಗ್ಯಕರ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮಾ ಅನಿಸಿಕೆಯನ್ನ ನಮಗೆ ತಿಳಿಸಿ. ಚುಕ್ಕೆಗಳು ಗಾಢ ಮತ್ತು ಅಗಲವಾಗಿದ್ದಷ್ಟೂ ಬಾಳೆಹಣ್ಣು ಹೆಚ್ಚು ಹೆಚ್ಚು ಹಣ್ಣಾಗುತ್ತಾ ಬಂದಿದೆ ಎಂದು ತಿಳಿದುಕೊಳ್ಳಬಹುದು, ಚುಕ್ಕೆಬೀಳಲು ತೊಡಗಿದ ಬಳಿಕ ಬಾಳೆಹಣ್ಣು ತನ್ನ ಎಲ್ಲಾ ಉತ್ತಮ ಗುಣಗಳನ್ನು ಪಡೆದಿರುತ್ತದೆ ಹಾಗಾಗಿ ಈ ಚುಕ್ಕೆಗಳು ಅಗಲವಾಗುವುದನ್ನು ಕಾಯುವ ಅಗತ್ಯವಿಲ್ಲ ಮತ್ತು ಚಿಕ್ಕ ಚುಕ್ಕೆಗಳಿದ್ದರೂ ಸಾಕು.

ಎದೆಯುರಿಯನ್ನು ಶಮನಗೊಳಿಸುತ್ತದೆ
ಅಜೀರ್ಣತೆಯ ಪ್ರಭಾವವನ್ನು ವಿರುದ್ಧ ದಿಕ್ಕಿನತ್ತ ಹೊರಳಿಸಲು ಬಾಳೆಹಣ್ಣು ಅತ್ಯುತ್ತಮವಾಗಿದೆ. ಪ್ರಾಯಶಃ ಮೊಸರಿನ ಬಳಿಕ ನಾವು ಅತಿ ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾದ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾಗಿದೆ. ತನ್ಮೂಲಕ ಈಗಾಗಲೇ ಕೆಟ್ಟಿರುವ ಹೊಟ್ಟೆಯನ್ನು ಈ ಆಹಾರ ಇನ್ನಷ್ಟು ಕೆಡಿಸಲಾರದು, ಬದಲಿಗೆ ಉಂಟಾಗಿರುವ ಎದೆಯುರಿ ಮತ್ತು ಹುಳಿತೇಗನ್ನು ಶಮನಗೊಳಿಸಬಲ್ಲುದು. ಹಾಗಾಗಿ ಮುಂದಿನ ಬಾರಿ ಈ ತೊಂದರೆ ಎದುರಾದರೆ ತಕ್ಷಣ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೊಂದನ್ನು ಸೇವಿಸಿದರೆ ಸಾಕು.

ಕ್ಯಾನ್ಸರ್ ವಿರುದ್ಧ ಹೆಚ್ಚುವರಿ ರಕ್ಷಣೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಮೂಲಕ ಕ್ಯಾನ್ಸರ್ ವಿರುದ್ದ ಹೆಚ್ಚುವರಿ ರಕ್ಷಣೆ ಪಡೆಯಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೇ ಸೇವನೆಗೆ ಅತ್ಯುತ್ತಮವಾಗಿದೆ.

ಮಾಸಿಕ ದಿನಗಳ ಸೋವಿನಿಂದ ಶಮನ ನೀಡುತ್ತದೆ
ಮಾಸಿಕ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ಭಾಗದ ಸ್ನಾಯುಗಳ ಸೆಡೆತವನ್ನು ಸಡಿಲಿಸಲು ಬಾಳೆಹಣ್ಣಿನ ಪೊಟ್ಯಾಶಿಯಂ ನೆರವಾಗುತ್ತದೆ. ಅಲ್ಲದೇ ಇದರಲ್ಲಿರುವ ವಿಟಮಿನ್ B6 ಹೊಟ್ಟೆಯುಬ್ಬರಿಕೆಯಾಗದಂತೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಳ್ಳದಂತೆ ತಡೆಯುತ್ತದೆ. ಹಾಗಾಗಿ ಮಾಸಿಕ ದಿನಗಳಲ್ಲಿ ಸೇವೆಸಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಅತ್ಯುತ್ತಮ ಆಹಾರವಾಗಿದೆ.

ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ
ನಿಮ್ಮ ರಕ್ತದೊತ್ತಡವನ್ನು ಆರೋಗ್ಯಕರ ಮಟ್ಟಗಳ ಮಿತಿಯೊಳಗೇ ಇರುವಂತೆ ಕಾಪಾಡಿಕೊಳ್ಳಲು, ನಿಮ್ಮ ರಕ್ತದಲ್ಲಿ ನೀವು ಉತ್ತಮ ಪೊಟ್ಯಾಸಿಯಮ್ ಮಟ್ಟವನ್ನು ಹೊಂದಿರಬೇಕು ಮತ್ತು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಪೊಟ್ಯಾಶಿಯಂನ ಆಗರವಾಗಿದೆ. ಹಾಗೂ ಹೃದಯದ ಒತ್ತಡವನ್ನು ಹೆಚ್ಚು ಮಾಡುವ ಸೋಡಿಯಂ ಪ್ರಮಾಣ ಅತಿ ಕಡಿಮೆ ಇದೆ. ಮತ್ತು ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುತ್ತವೆ,

ಖಿನ್ನತೆಯನ್ನು ನಿವಾರಿಸುತ್ತದೆ
ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫ್ಯಾನ್ ಎಂಬ ಅಮೈನೋ ಆಮ್ಲ ಮೆದುಳಿನಲ್ಲಿ ಸೆರೋಟೋನಿನ್ ಎಂಬ ರಸದೂತವನ್ನು ಉತ್ಪಾದಿಸಲು ಪ್ರಚೋದನೆ ನೀಡುತ್ತದೆ. ಇದು ಮನೋಭಾವವನ್ನು ನಿಯಂತ್ರಿಸುವ ಹಾಗೂ ಸುಖನಿದ್ದೆ ಆವರಿಸಲು ಅಗತ್ಯವಾದ ರಸದೂತವಾಗಿದೆ. ಹಾಗಾಗಿ ಬಾಳೆಹಣ್ಣು ತಿಂದ ಬಳಿಕ ನಿರಾಳತೆ ದೊರಕುವ ಜೊತೆಗೇ ಸುಖನಿದ್ದೆಯೂ ಆವರಿಸುತ್ತದೆ.

ಅವು ಶಕ್ತಿಯ ತ್ವರಿತ ಶಕ್ತಿಯ ಮೂಲವಾಗಿದೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಮೂರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ – ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಮತ್ತು ಕರಗುವ ನಾರಿನೊಂದಿಗೆ ಸಂಯೋಜಿಸಲ್ಪಟ್ಟಿದೆ. ಶ್ರಮದಾಯಕ ವ್ಯಾಯಾಮದ ಮೊದಲು ಕೇವಲ 2 ಬಾಳೆಹಣ್ಣುಗಳನ್ನು ತಿನ್ನುವುದರಿಂದ ದೇಹದ ಸಹಿಷ್ಣುತೆಯನ್ನು ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಹೆಚ್ಚಿಸಬಹುದು ಎಂದು ಸಂಶೋಧನೆಗಳು ವಿವರಿಸಿವೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯಲು ಸಹಾ ಸಹಾಯ ಮಾಡುತ್ತದೆ.

ತಕ್ಷಣವೇ ಶಕ್ತಿ ದೊರಕುತ್ತದೆ
ಬಾಳೆಹಣ್ಣಿನಲ್ಲಿ ಹೆಚ್ಚಿನ ಕ್ಯಾಲೋರಿಗಳಿದ್ದು ತಿಂದ ಬಳಿಕ ಕ್ಷಿಪ್ರ ಸಮಯದಲ್ಲಿಯೇ ರಕ್ತದ ಮೂಲಕ ದೇಹದಲ್ಲಿ ಹೆಚ್ಚಿನ ಶಕ್ತಿ ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ ಹೆಚ್ಚಿನ ಶಕ್ತಿಯ ಅಗತ್ಯವಿರುವ ಸಂದರ್ಭದಲ್ಲಿ ಅನಾರೋಗ್ಯಕರ ಶಕ್ತಿಪೇಯಗಳನ್ನು ಕುಡಿಯುವ ಬದಲು ಕೆಲವು ಬಾಳೆಹಣ್ಣುಗಳನ್ನು ತಿಂದರೆ ಸಾಕು. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ಸ್ನಾಯುಗಳನ್ನು ಸೆಳೆತದಿಂದ ತಡೆಯುತ್ತದೆ. ಇತರ ಖನಿಜಗಳು ಮತ್ತು ಪೋಷಕಾಂಶಗಳು ದೀರ್ಘಕಾಲದ ದೈಹಿಕ ಸಹಿಷ್ಣುತೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.

ಜೀರ್ಣಾಂಗದಲ್ಲಿ ಉಂಟಾಗಿದ್ದ ಹುಣ್ಣುಗಳು ಬೇಗನೇ ಮಾಗುತ್ತವೆ
ಆಮ್ಲೀಯ ಆಹಾರದ ಕಾರಣ ಎದುರಾಗಿರುವ ಹೊಟ್ಟೆ ಮತ್ತು ಕರುಳಿನ ಹುಣ್ಣುಗಳು (ಅಲ್ಸರ್) ನಿಮ್ಮ ಆಹಾರಸೇವನೆಯನ್ನೇ ಬಾಧಿತಗೊಳಿಸಬಹುದು. ಹೊಟ್ಟೆಯ ಹುಣ್ಣು ಇದ್ದರೆ ಖಾರ, ಹುಳಿ ಉಪ್ಪು ಯಾವುದನ್ನೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಈ ಹುಣ್ಣುಗಳ ಮೇಲೆ ಬಾಳೆಹಣ್ಣು ಶಮನಕಾರಿ ಪ್ರಭಾವ ನೀಡುತ್ತದೆ ಹಾಗೂ ಉರಿಯನ್ನೂ ಉಂಟುಮಾಡುವುದಿಲ್ಲ. ಈ ಮೂಲಕ ಈ ತೊಂದರೆ ಇರುವ ವ್ಯಕ್ತಿಗಳಿಗೆ ಅಗತ್ಯವಿರುವ ಅಮೂಲ್ಯ ಪೋಷಕಾಂಶಗಳನ್ನೂ ಒದಗಿಸುತ್ತದೆ.

ಮಲಬದ್ದತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನಲ್ಲಿರುವ ಕರಗುವ ನಾರು ಜೀರ್ಣಗೊಂಡ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸಲು ನೆರವಾಗುವ ಮೂಲಕ ತ್ಯಾಜ್ಯಗಳು ಗಟ್ಟಿಯಾಗದಂತೆ ಹಾಗೂ ಮಲಬದ್ದತೆಯಾಗದಂತೆ ನೆರವಾಗುತ್ತವೆ. ಮುಂದಿನ ಬಾರಿ ಮಲಬದ್ದತೆಯ ತೊಂದರೆ ಕಾಣಿಸಿಕೊಂಡರೆ ರಾತ್ರಿ ಮಲಗುವ ಮುನ್ನ ಎರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣುಗಳನ್ನು ತಿಂದರೆ ಸಾಕು.

ರಕ್ತಹೀನತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನದಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ನಮ್ಮ ಪು ರಕ್ತ ಕಣಗಳ ಮುಖ್ಯ ಅಂಶಗಳಲ್ಲಿ ಕಬ್ಬಿಣವೂ ಒಂದು, ಅದು ನಮ್ಮ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಸಾಗಿಸಲು ಅಗತ್ಯವಾಗಿದೆ. ಬಾಳೆಹಣ್ಣುಗಳು ನಿಮ್ಮ ದೇಹದ ಕಬ್ಬಿಣದ ಅಗತ್ಯವನ್ನು ಪೂರೈಸುತ್ತವೆ, ಇದರಿಂದಾಗಿ ರಕ್ತಹೀನತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ರಕ್ತಹೀನತೆಯಿರುವ ವ್ಯಕ್ತಿಗಳ ರಕ್ತದಲ್ಲಿ ಬ್ಬಿಣದ ಅಂಶದ ಕೊರತೆ ಇರುತ್ತದೆ ಮತ್ತು ರೋಗಪೀಡಿತ ಕೆಂಪು ರಕ್ತ ಕಣಗಳು ಹೆಚ್ಚಿರುತ್ತವೆ.

ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಹೆಚ್ಚು ಪೊಟ್ಯಾಶಿಯಂ ಇರುತ್ತದೆ
ಚುಕ್ಕೆಬೀಳಲು ಪ್ರಾರಂಭವಾದ ಬಳಿಕ ತಿರುಳಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚುತ್ತಾ ಹೋಗುವುದು ಒಂದು ವಿಸ್ಮಯ. ಆದರೆ ಸೋಡಿಯಂ ಮಟ್ಟ ಮಾತ್ರ ಅಲ್ಪವೇ ಇರುತ್ತದೆ. “Journal of the American Medical Association”ಮಾಧ್ಯಮದಲ್ಲಿ ಪ್ರಕಟವಾದ ಪಿ.ಕೆ ವ್ಹೆಲ್ಟನ್ ಮತ್ತು ತಂಡದವರ ವರದಿಯ ಪ್ರಕಾರ ನಿತ್ಯವೂ ಬಾಳೆಹಣ್ಣು ಸೇವಿಸುತ್ತಾ ಬಂದರೆ ಇದು ಸಂಕೋಚನದ ಒತ್ತಡವನ್ನು 3 mmHg ಹಾಗೂ ವಿಕಸನದ ಒತ್ತಡವನ್ನು2 mmHg ವರೆಗೆ ತಗ್ಗಿಸುತ್ತದೆ. “Health foodstyle.net” ಪ್ರಕಾರ, ದಿನಕ್ಕೆರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣನ್ನು ಸೇವಿಸಿದಾಗ ಇದರಲ್ಲಿರುವ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…