ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ ನಂಬರ್ ಒಂದು ಹಣ್ಣು ಎಂದರೆ ಬಾಳೆಹಣ್ಣು ಎಂದು ಹೇಳಿದರೆ ಅಚ್ಚರಿಪಡಬೇಕಾಗಿಲ್ಲ. ಸರ್ವಕಾಲದಲ್ಲಿ ಲಭ್ಯ, ಅಗ್ಗ ಹಾಗೂ ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲ ಹಣ್ಣು ಎಂದರೆ ಬಾಳೆಹಣ್ಣು. ಅದರಲ್ಲೂ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನು ಸಾಮಾನ್ಯವಾಗಿ ನೀವು ಬಾಳೆಹಣ್ಣನ್ನು ತಿನ್ನುವಾಗ ಅದರ ಸಿಪ್ಪೆ ಮೇಲೆ ಚುಕ್ಕೆಗಳನ್ನು ನೋಡಿರಬಹುದು, ಈ ಸಿಪ್ಪೆಗಳು ಹೇಗೆ ನಮ್ಮ ಆರೋಗ್ಯಕ್ಕೆ ಲಾಭಕಾರಕ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ, ಹಾಗಾದರೆ ಚುಕ್ಕೆ ಇರುವ ಬಾಳೆ ಹಣ್ಣು ನಮ್ಮ ದೇಹಕ್ಕೆ ಹೇಗೆ ಆರೋಗ್ಯಕರ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮಾ ಅನಿಸಿಕೆಯನ್ನ ನಮಗೆ ತಿಳಿಸಿ. ಚುಕ್ಕೆಗಳು ಗಾಢ ಮತ್ತು ಅಗಲವಾಗಿದ್ದಷ್ಟೂ ಬಾಳೆಹಣ್ಣು ಹೆಚ್ಚು ಹೆಚ್ಚು ಹಣ್ಣಾಗುತ್ತಾ ಬಂದಿದೆ ಎಂದು ತಿಳಿದುಕೊಳ್ಳಬಹುದು, ಚುಕ್ಕೆಬೀಳಲು ತೊಡಗಿದ ಬಳಿಕ ಬಾಳೆಹಣ್ಣು ತನ್ನ ಎಲ್ಲಾ ಉತ್ತಮ ಗುಣಗಳನ್ನು ಪಡೆದಿರುತ್ತದೆ ಹಾಗಾಗಿ ಈ ಚುಕ್ಕೆಗಳು ಅಗಲವಾಗುವುದನ್ನು ಕಾಯುವ ಅಗತ್ಯವಿಲ್ಲ ಮತ್ತು ಚಿಕ್ಕ ಚುಕ್ಕೆಗಳಿದ್ದರೂ ಸಾಕು.
ಎದೆಯುರಿಯನ್ನು ಶಮನಗೊಳಿಸುತ್ತದೆ
ಅಜೀರ್ಣತೆಯ ಪ್ರಭಾವವನ್ನು ವಿರುದ್ಧ ದಿಕ್ಕಿನತ್ತ ಹೊರಳಿಸಲು ಬಾಳೆಹಣ್ಣು ಅತ್ಯುತ್ತಮವಾಗಿದೆ. ಪ್ರಾಯಶಃ ಮೊಸರಿನ ಬಳಿಕ ನಾವು ಅತಿ ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾದ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾಗಿದೆ. ತನ್ಮೂಲಕ ಈಗಾಗಲೇ ಕೆಟ್ಟಿರುವ ಹೊಟ್ಟೆಯನ್ನು ಈ ಆಹಾರ ಇನ್ನಷ್ಟು ಕೆಡಿಸಲಾರದು, ಬದಲಿಗೆ ಉಂಟಾಗಿರುವ ಎದೆಯುರಿ ಮತ್ತು ಹುಳಿತೇಗನ್ನು ಶಮನಗೊಳಿಸಬಲ್ಲುದು. ಹಾಗಾಗಿ ಮುಂದಿನ ಬಾರಿ ಈ ತೊಂದರೆ ಎದುರಾದರೆ ತಕ್ಷಣ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೊಂದನ್ನು ಸೇವಿಸಿದರೆ ಸಾಕು.

ಕ್ಯಾನ್ಸರ್ ವಿರುದ್ಧ ಹೆಚ್ಚುವರಿ ರಕ್ಷಣೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಮೂಲಕ ಕ್ಯಾನ್ಸರ್ ವಿರುದ್ದ ಹೆಚ್ಚುವರಿ ರಕ್ಷಣೆ ಪಡೆಯಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೇ ಸೇವನೆಗೆ ಅತ್ಯುತ್ತಮವಾಗಿದೆ.
ಮಾಸಿಕ ದಿನಗಳ ಸೋವಿನಿಂದ ಶಮನ ನೀಡುತ್ತದೆ
ಮಾಸಿಕ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ಭಾಗದ ಸ್ನಾಯುಗಳ ಸೆಡೆತವನ್ನು ಸಡಿಲಿಸಲು ಬಾಳೆಹಣ್ಣಿನ ಪೊಟ್ಯಾಶಿಯಂ ನೆರವಾಗುತ್ತದೆ. ಅಲ್ಲದೇ ಇದರಲ್ಲಿರುವ ವಿಟಮಿನ್ B6 ಹೊಟ್ಟೆಯುಬ್ಬರಿಕೆಯಾಗದಂತೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಳ್ಳದಂತೆ ತಡೆಯುತ್ತದೆ. ಹಾಗಾಗಿ ಮಾಸಿಕ ದಿನಗಳಲ್ಲಿ ಸೇವೆಸಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಅತ್ಯುತ್ತಮ ಆಹಾರವಾಗಿದೆ.
ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ
ನಿಮ್ಮ ರಕ್ತದೊತ್ತಡವನ್ನು ಆರೋಗ್ಯಕರ ಮಟ್ಟಗಳ ಮಿತಿಯೊಳಗೇ ಇರುವಂತೆ ಕಾಪಾಡಿಕೊಳ್ಳಲು, ನಿಮ್ಮ ರಕ್ತದಲ್ಲಿ ನೀವು ಉತ್ತಮ ಪೊಟ್ಯಾಸಿಯಮ್ ಮಟ್ಟವನ್ನು ಹೊಂದಿರಬೇಕು ಮತ್ತು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಪೊಟ್ಯಾಶಿಯಂನ ಆಗರವಾಗಿದೆ. ಹಾಗೂ ಹೃದಯದ ಒತ್ತಡವನ್ನು ಹೆಚ್ಚು ಮಾಡುವ ಸೋಡಿಯಂ ಪ್ರಮಾಣ ಅತಿ ಕಡಿಮೆ ಇದೆ. ಮತ್ತು ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುತ್ತವೆ,

ಖಿನ್ನತೆಯನ್ನು ನಿವಾರಿಸುತ್ತದೆ
ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫ್ಯಾನ್ ಎಂಬ ಅಮೈನೋ ಆಮ್ಲ ಮೆದುಳಿನಲ್ಲಿ ಸೆರೋಟೋನಿನ್ ಎಂಬ ರಸದೂತವನ್ನು ಉತ್ಪಾದಿಸಲು ಪ್ರಚೋದನೆ ನೀಡುತ್ತದೆ. ಇದು ಮನೋಭಾವವನ್ನು ನಿಯಂತ್ರಿಸುವ ಹಾಗೂ ಸುಖನಿದ್ದೆ ಆವರಿಸಲು ಅಗತ್ಯವಾದ ರಸದೂತವಾಗಿದೆ. ಹಾಗಾಗಿ ಬಾಳೆಹಣ್ಣು ತಿಂದ ಬಳಿಕ ನಿರಾಳತೆ ದೊರಕುವ ಜೊತೆಗೇ ಸುಖನಿದ್ದೆಯೂ ಆವರಿಸುತ್ತದೆ.
ಅವು ಶಕ್ತಿಯ ತ್ವರಿತ ಶಕ್ತಿಯ ಮೂಲವಾಗಿದೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಮೂರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ – ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಮತ್ತು ಕರಗುವ ನಾರಿನೊಂದಿಗೆ ಸಂಯೋಜಿಸಲ್ಪಟ್ಟಿದೆ. ಶ್ರಮದಾಯಕ ವ್ಯಾಯಾಮದ ಮೊದಲು ಕೇವಲ 2 ಬಾಳೆಹಣ್ಣುಗಳನ್ನು ತಿನ್ನುವುದರಿಂದ ದೇಹದ ಸಹಿಷ್ಣುತೆಯನ್ನು ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಹೆಚ್ಚಿಸಬಹುದು ಎಂದು ಸಂಶೋಧನೆಗಳು ವಿವರಿಸಿವೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯಲು ಸಹಾ ಸಹಾಯ ಮಾಡುತ್ತದೆ.

ತಕ್ಷಣವೇ ಶಕ್ತಿ ದೊರಕುತ್ತದೆ
ಬಾಳೆಹಣ್ಣಿನಲ್ಲಿ ಹೆಚ್ಚಿನ ಕ್ಯಾಲೋರಿಗಳಿದ್ದು ತಿಂದ ಬಳಿಕ ಕ್ಷಿಪ್ರ ಸಮಯದಲ್ಲಿಯೇ ರಕ್ತದ ಮೂಲಕ ದೇಹದಲ್ಲಿ ಹೆಚ್ಚಿನ ಶಕ್ತಿ ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ ಹೆಚ್ಚಿನ ಶಕ್ತಿಯ ಅಗತ್ಯವಿರುವ ಸಂದರ್ಭದಲ್ಲಿ ಅನಾರೋಗ್ಯಕರ ಶಕ್ತಿಪೇಯಗಳನ್ನು ಕುಡಿಯುವ ಬದಲು ಕೆಲವು ಬಾಳೆಹಣ್ಣುಗಳನ್ನು ತಿಂದರೆ ಸಾಕು. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ಸ್ನಾಯುಗಳನ್ನು ಸೆಳೆತದಿಂದ ತಡೆಯುತ್ತದೆ. ಇತರ ಖನಿಜಗಳು ಮತ್ತು ಪೋಷಕಾಂಶಗಳು ದೀರ್ಘಕಾಲದ ದೈಹಿಕ ಸಹಿಷ್ಣುತೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.
ಜೀರ್ಣಾಂಗದಲ್ಲಿ ಉಂಟಾಗಿದ್ದ ಹುಣ್ಣುಗಳು ಬೇಗನೇ ಮಾಗುತ್ತವೆ
ಆಮ್ಲೀಯ ಆಹಾರದ ಕಾರಣ ಎದುರಾಗಿರುವ ಹೊಟ್ಟೆ ಮತ್ತು ಕರುಳಿನ ಹುಣ್ಣುಗಳು (ಅಲ್ಸರ್) ನಿಮ್ಮ ಆಹಾರಸೇವನೆಯನ್ನೇ ಬಾಧಿತಗೊಳಿಸಬಹುದು. ಹೊಟ್ಟೆಯ ಹುಣ್ಣು ಇದ್ದರೆ ಖಾರ, ಹುಳಿ ಉಪ್ಪು ಯಾವುದನ್ನೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಈ ಹುಣ್ಣುಗಳ ಮೇಲೆ ಬಾಳೆಹಣ್ಣು ಶಮನಕಾರಿ ಪ್ರಭಾವ ನೀಡುತ್ತದೆ ಹಾಗೂ ಉರಿಯನ್ನೂ ಉಂಟುಮಾಡುವುದಿಲ್ಲ. ಈ ಮೂಲಕ ಈ ತೊಂದರೆ ಇರುವ ವ್ಯಕ್ತಿಗಳಿಗೆ ಅಗತ್ಯವಿರುವ ಅಮೂಲ್ಯ ಪೋಷಕಾಂಶಗಳನ್ನೂ ಒದಗಿಸುತ್ತದೆ.
ಮಲಬದ್ದತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನಲ್ಲಿರುವ ಕರಗುವ ನಾರು ಜೀರ್ಣಗೊಂಡ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸಲು ನೆರವಾಗುವ ಮೂಲಕ ತ್ಯಾಜ್ಯಗಳು ಗಟ್ಟಿಯಾಗದಂತೆ ಹಾಗೂ ಮಲಬದ್ದತೆಯಾಗದಂತೆ ನೆರವಾಗುತ್ತವೆ. ಮುಂದಿನ ಬಾರಿ ಮಲಬದ್ದತೆಯ ತೊಂದರೆ ಕಾಣಿಸಿಕೊಂಡರೆ ರಾತ್ರಿ ಮಲಗುವ ಮುನ್ನ ಎರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣುಗಳನ್ನು ತಿಂದರೆ ಸಾಕು.

ರಕ್ತಹೀನತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನದಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ನಮ್ಮ ಪು ರಕ್ತ ಕಣಗಳ ಮುಖ್ಯ ಅಂಶಗಳಲ್ಲಿ ಕಬ್ಬಿಣವೂ ಒಂದು, ಅದು ನಮ್ಮ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಸಾಗಿಸಲು ಅಗತ್ಯವಾಗಿದೆ. ಬಾಳೆಹಣ್ಣುಗಳು ನಿಮ್ಮ ದೇಹದ ಕಬ್ಬಿಣದ ಅಗತ್ಯವನ್ನು ಪೂರೈಸುತ್ತವೆ, ಇದರಿಂದಾಗಿ ರಕ್ತಹೀನತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ರಕ್ತಹೀನತೆಯಿರುವ ವ್ಯಕ್ತಿಗಳ ರಕ್ತದಲ್ಲಿ ಬ್ಬಿಣದ ಅಂಶದ ಕೊರತೆ ಇರುತ್ತದೆ ಮತ್ತು ರೋಗಪೀಡಿತ ಕೆಂಪು ರಕ್ತ ಕಣಗಳು ಹೆಚ್ಚಿರುತ್ತವೆ.
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಹೆಚ್ಚು ಪೊಟ್ಯಾಶಿಯಂ ಇರುತ್ತದೆ
ಚುಕ್ಕೆಬೀಳಲು ಪ್ರಾರಂಭವಾದ ಬಳಿಕ ತಿರುಳಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚುತ್ತಾ ಹೋಗುವುದು ಒಂದು ವಿಸ್ಮಯ. ಆದರೆ ಸೋಡಿಯಂ ಮಟ್ಟ ಮಾತ್ರ ಅಲ್ಪವೇ ಇರುತ್ತದೆ. “Journal of the American Medical Association”ಮಾಧ್ಯಮದಲ್ಲಿ ಪ್ರಕಟವಾದ ಪಿ.ಕೆ ವ್ಹೆಲ್ಟನ್ ಮತ್ತು ತಂಡದವರ ವರದಿಯ ಪ್ರಕಾರ ನಿತ್ಯವೂ ಬಾಳೆಹಣ್ಣು ಸೇವಿಸುತ್ತಾ ಬಂದರೆ ಇದು ಸಂಕೋಚನದ ಒತ್ತಡವನ್ನು 3 mmHg ಹಾಗೂ ವಿಕಸನದ ಒತ್ತಡವನ್ನು2 mmHg ವರೆಗೆ ತಗ್ಗಿಸುತ್ತದೆ. “Health foodstyle.net” ಪ್ರಕಾರ, ದಿನಕ್ಕೆರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣನ್ನು ಸೇವಿಸಿದಾಗ ಇದರಲ್ಲಿರುವ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.