ಸುದ್ದಿ

ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

42

ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ ಮೊದಲ ಹಾಗೂ ಪ್ರಮುಖ ಸವಾಲು. ವಿಧಾನಸಭಾ ಚುನಾವಣೆ ಫಲಿತಾಂಶ ನಂತರ ಪ್ರಮಾಣವಚನ ಸ್ವೀಕರಿಸಿ, ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಮೂರೇ ದಿನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗಲೂ ಆಗುತ್ತಾ..? ಅಥವಾ ಆಗಲ್ವಾ..? ಎಂಬ ಕುತೂಹಲ ಮೂಡಿದೆ.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್, ಜೆಡಿಎಸ್‌ನ 16 ಶಾಸಕರು ರಾಜೀನಾಮೆ ಕೊಟ್ಟು ಮುಂಬೈನಲ್ಲಿ ಠಿಕಾಣಿ ಹೂಡಿದ್ದಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಆರ್‌.ಶಂಕರ್ ಅನರ್ಹ ನಂತರ ವಿಧಾಸನಭೆ ಬಲ 221ಕ್ಕೆ ಕುಸಿದಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹ ಆದರೆ ಬಿಜೆಪಿಗೆ ತೊಂದರೆ ಇಲ್ಲ. ಒಂದು ವೇಳೆ ಅವರು ಕೊನೆ ಕ್ಷಣದಲ್ಲಿ ನಿಷ್ಠೆ ಬದಲಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ವಾಪಸ್ಸಾದರೆ ಬಿಜೆಪಿ ಸರ್ಕಾರಕ್ಕೆ ಆಪತ್ತು ತಪ್ಪಿದ್ದಲ್ಲ. ಈ ಆತಂಕವೇ ಬಿಜೆಪಿ ವರಿಷ್ಠ ಅಮಿತ್‌ ಶಾಗೆ ಕಾಡ್ತಿದೆ.

ಅಮಿತ್‌ ಶಾ ಷರತ್ತುಗಳಿಗೆ ಒಪ್ಪಿಕೊಂಡು ಸರ್ಕಾರ ರಚಿಸಿರುವ ಯಡಿಯೂರಪ್ಪ ಅವರ ಮುಂದೆ ಈಗ ಬಹುಮತ ಸಾಬೀತು ಸವಾಲು ಇದೆ. ಸೋಮವಾರ ಅಥವಾ ಮಂಗಳವಾರ ಸದನದಲ್ಲಿ ಬಹುಮತ ಸಾಬೀತು ಪಡಿಸುವ ಸಾಧ್ಯತೆ ಇದೆ.

ಇತ್ತ, ಬಿಜೆಪಿ ಸರ್ಕಾರ ರಚನೆಗೆ ಆಕ್ಷೇಪ ಎತ್ತಿರುವ ಕಾಂಗ್ರೆಸ್ -ಜೆಡಿಎಸ್‌, ಬಹುಮತ ಇಲ್ಲದೆ ಸರ್ಕಾರ ರಚನೆಗೆ ಹೇಗೆ ಸಾಧ್ಯ..? ಎಂದು ಪ್ರಶ್ನಿಸಿವೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿ ರಾಜ್ಯಪಾಲರ ಕ್ರಮ ಖಂಡಿಸಿವೆ. ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು, ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್‌ ಹೇಳಿದೆ. ದೇಶದ ಕುದುರೆ ವ್ಯಾಪಾರ ಪಕ್ಷವೊಂದು ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿದೆ ಎಂದು ಟೀಕಿಸಿದೆ.

ಪ್ರಜಾಪ್ರಭುತ್ವದ ಪ್ರಕಾರ ಬಿಜೆಪಿ ಸರ್ಕಾರ ರಚನೆ ಅಸಾಧ್ಯ. ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಬಿಜೆಪಿಗೆ ಈಗ ಕೇವಲ 105 ಶಾಸಕರ ಸಂಖ್ಯ ಬಲವಷ್ಟೇ ಇದೆ. ಉಳಿದ 6 ಜನರಿಗೆ ಅವರು ಏನು ಮಾಡುತ್ತಾರೆ..? ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.ಮಹಾರಾಷ್ಟ್ರದ ವಿವಿದೆಡೆ ಬೀಡುಬಿಟ್ಟಿರುವ ಅತೃಪ್ತ ಶಾಸಕರು ಯಡಿಯೂರಪ್ಪ ಬಹುಮತ ಸಾಬೀತು ಮಾಡುವವರೆಗೆ ಅಲ್ಲಿಯೇ ಠಿಕಾಣಿ ಹೂಡಲಿದ್ದಾರೆ. ಯಾವತ್ತು ಬಿಎಸ್‌ವೈ ಸದನದಲ್ಲಿ ಬಹುಮತ ಸಾಬೀತು ಮಾಡ್ತಾರೋ ಅಂದು ಕರ್ನಾಟಕಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಅತೃಪ್ತರು ಬಹುಮತ ಸಾಬೀತು ದಿನ ಗೈರಾಗುವ ಮೂಲಕ ಸದನದ ಮ್ಯಾಜಿಕ್‌ ನಂಬರ್ 111 ಕುಸಿಯುವಂತೆ ಮಾಡ್ತಾರೆ. ಆಗ ಯಡಿಯೂರಪ್ಪ ಸುಲಭವಾಗಿ ಬಹುಮತ ಸಾಬೀತು ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…