ಆರೋಗ್ಯ

ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

65


ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು.

ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ ನಾವು ಆರೋಗ್ಯವಂತರಾಗಿರಲು ಹೆಚ್ಚಿನ ಭಾಗ ಪ್ರಕೃತಿಯೇ ನಮಗೆ ಸಹಾಯಕವಾಗಿದೆ. ಈ ಕಾಲದಲ್ಲಿ ಸೂರ್ಯನು ದಕ್ಷಿಣಾಯನದಲ್ಲಿ ಇರುವುದರಿಂದ ಹಗಲುಗಳು ಕಿರಿದಾಗಿದ್ದು, ರಾತ್ರಿಗಳು ದೀರ್ಘವಾಗಿರುತ್ತವೆ. ಇದರಿಂದ ದೇಹದ ವಿಶ್ರಾಂತಿಗೆ ಸಾಕಷ್ಟು ಸಮಯ ದೊರೆಯುತ್ತದೆ. ಈ ಋತುವಿನಲ್ಲಿ ಜಠರಾಗ್ನಿಯೂ ಪ್ರಖರವಾಗಿ ಇರುವುದರಿಂದ ಸೇವಿಸಿದ ಆಹಾರ ಚೆನ್ನಾಗಿ ಪಚನವಾಗುತ್ತದೆ.

ನಮ್ಮ ದೇಶದಲ್ಲಿ ಚಳಿಗಾಲವು ಶರದ್ ಋತುವಿನಿಂದ ಆರಂಭವಾಗುತ್ತದೆ. ಆದ್ದರಿಂದ ಶರೀರವನ್ನು ಬೆಚ್ಚಗಿಡಲು ಉಣ್ಣೆ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಹದಲ್ಲಿ ಶಾಖವನ್ನು ಉತ್ಪತ್ತಿ ಮಾಡುವ ಆಹಾರ ಪದಾರ್ಥಗಳನ್ನು ಸೇವಿಸಬೇಕಾಗುತ್ತದೆ.  ಈ ಋತುವಿನಲ್ಲಿ ಹಸಿವು ಜಾಸ್ತಿಯಾಗುವುದರಿಂದ ಕಾಲಕಾಲಕ್ಕೆ ಶರೀರಕ್ಕೆ ಆಹಾರ ಪೂರೈಸಬೇಕಾಗುತ್ತದೆ. ಉದ್ದೇಶಪೂರ್ವಕವಾಗಿ ಹಸಿವನ್ನು ತಡೆಯಲು ಪ್ರಯತ್ನಿಸುವುದು ದೇಹಕ್ಕೆ ಹಾನಿ ಉಂಟು ಮಾಡಬಹುದು. ಹಾಗೆ ಮಾಡುವುದರಿಂದ ಜಠರಾಗ್ನಿಯು ರಕ್ತ, ಮಾಂಸ, ಧಾತು ಹಾಗೂ ರಸಗಳನ್ನು ದಹಿಸಿ ಶರೀರ ಕೃಷವಾಗಬಹುದು ಮತ್ತು ವಾಯುಪ್ರಕೋಪ ಹೆಚ್ಚಬಹುದು.

ಚಳಿಗಾಲದಲ್ಲಿ ವಾಯು ಪ್ರಕೋಪ ಮತ್ತು ಕಫ ಸಂಚಯ ಆಗುವುದರಿಂದ ಅವುಗಳನ್ನು ಹೆಚ್ಚಿಸುವ ಪದಾರ್ಥಗಳ ಸೇವನೆ ವರ್ಜಿಸಬೇಕು. ಸಿಹಿ, ಆಮ್ಲ ಮತ್ತು ಲವಣಯುಕ್ತ ಆಹಾರಗಳನ್ನು ಸೇವಿಸಬೇಕು. ಈ ಕಾಲದಲ್ಲಿ ಬಿಸಿಯಾದ ಪದಾರ್ಥಗಳನ್ನು ಸೇವಿಸುವುದು ಹೆಚ್ಚು ಹಿತ ಎನಿಸುತ್ತದೆ. ಆದ್ದರಿಂದ ಚಹಾ ಹಾಗೂ ಕಾಫಿಯನ್ನು ನಾವು ಹೆಚ್ಚಾಗಿ ಸೇವಿಸುತ್ತೇವೆ. ಆದರೆ ಅದು ಆರೋಗ್ಯಕ್ಕೆ ಒಳ್ಳೆಯದಲ್ಲ. ಚಹಾ, ಕಾಫಿಗಳ ಅತಿಯಾದ ಸೇವನೆ ವಾಯು ಪ್ರಕೋಪವನ್ನು ಹೆಚ್ಚಿಸುತ್ತದೆ. ಅದಕ್ಕೆ ಬದಲಾಗಿ ಬಿಸಿ ಸೂಪ್‌ಗಳನ್ನು ಕುಡಿಯಬಹುದು.

ಚಳಿಗಾಲದಲ್ಲಿ ಕ್ಯಾರೆಟ್, ಮೂಲಂಗಿ, ಗೆಣಸು ಮುಂತಾದ ಗೆಡ್ಡೆಗಳು, ಮೆಂತೆ ಪಲ್ಲೆ, ಬಸಳೆ ಸೊಪ್ಪು, ರಾಜಗಿರಿ ಸೊಪ್ಪು, ಪಾಲಕ್, ಸಬ್ಬಸಿಗೆ ಮುಂತಾದ ಸೊಪ್ಪುಗಳು, ತರಕಾರಿಗಳನ್ನು ಸೇವಿಸುವುದು ಒಳ್ಳೆಯದು. ಈ ಋತುವಿನಲ್ಲಿ ಚರ್ಮದಲ್ಲಿ ಜಿಡ್ಡಿನ ಅಂಶ ಕಡಿಮೆ ಆಗುವುದರಿಂದ ಜಿಡ್ಡನ್ನು ಪೂರೈಸುವ ಆಹಾರ ಪದಾರ್ಥ ಸೇವಿಸಬೇಕು. ಹಾಲು, ತುಪ್ಪ, ಬೆಣ್ಣೆ, ಕೆನೆ, ಗೋಡಂಬಿ, ಕಲ್ಲುಸಕ್ಕರೆ, ಬಾದಾಮಿ, ಗಜ್ಜರಿ ಹಲ್ವ, ಬಾಸುಂದಿ, ಒಣ ಕೊಬ್ಬರಿ, ಬೆಲ್ಲ ಮುಂತಾದ ಪದಾರ್ಥಗಳನ್ನು ಸೇವಿಸಬೇಕು.

ಶರೀರದ ಉಷ್ಣತೆ ಕಾಪಾಡಿಕೊಳ್ಳಲು ಹೆಚ್ಚು ಕ್ಯಾಲೊರಿಗಳ ಅವಶ್ಯಕತೆ ಇರುವುದರಿಂದ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬಹುದು. ಈ ಋತುವಿನಲ್ಲಿ ಬರುವ ಹಣ್ಣುಗಳಾದ ಸೀತಾಫಲ, ಪಪ್ಪಾಯಿ, ಕಿತ್ತಳೆ, ಪೇರು ಮುಂತಾದ ಹಣ್ಣುಗಳನ್ನು ಸೇವಿಸಬೇಕು. ತರಕಾರಿಗಳಲ್ಲಿ ಹೂಕೋಸು ವರ್ಜ್ಯ. ಏಕೆಂದರೆ ಅದು ಕೀಲುನೋವನ್ನು ಉಂಟುಮಾಡುತ್ತದೆ.

ರಾತ್ರಿ ತುಂಬಾ ತಡವಾಗಿ ಊಟಮಾಡುವುದು, ಮುಂಜಾನೆ ತಡಮಾಡಿ ಏಳುವುದು, ಉಪವಾಸ ಮಾಡುವುದು, ತಂಗಳು ಆಹಾರ ಸೇವನೆ ಈ ಋತುವಿಗೆ ತಕ್ಕುದಲ್ಲ. ಇವೆಲ್ಲ ವಾಯು ಪ್ರಕೋಪ ಹೆಚ್ಚಿಸುತ್ತವೆ.  ವಾತ ಹಾಗೂ ಪಿತ್ತ ಪ್ರಕೃತಿಯವರಿಗೆ ಈ ಋತು ಸರಿಯಾದುದಲ್ಲ. ಆದ್ದರಿಂದ ಕಫ ಪ್ರಕೃತಿಯವರು ಹುಳಿಯಾದ ಪದಾರ್ಥಗಳು, ಮೊಸರು, ಬಾಳೆಹಣ್ಣನ್ನು ಸೇವಿಸಬಾರದು.  ವಾತ ಪ್ರಕೃತಿಯವರು ಅದರಿಂದ ಪಾರಾಗಲು ಮತ್ತು ಶರೀರದಲ್ಲಿ ಸ್ಫೂರ್ತಿ ಹೊಂದಲು ಸಾಸಿವೆ ಎಣ್ಣೆಯಿಂದ ಶರೀರವನ್ನು ಮಸಾಜ್ ಮಾಡಿಕೊಳ್ಳಬೇಕು. ಇದರಿಂದ ಸಂಧಿವಾತ, ಕೀಲುನೋವುಗಳು ಗುಣವಾಗುತ್ತವೆ ಮತ್ತು ತ್ವಚೆಯೂ ಕೋಮಲವಾಗಿ ಇರುತ್ತದೆ. ಕಫ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಿಗಳಿಗೆ ಆಕಳ ತುಪ್ಪದಲ್ಲಿ ಸೈಂಧವ ಲವಣ, ಮೆಂತೆ ಮತ್ತು ಕರ್ಪೂರ ಬೆರೆಸಿ ಎದೆಗೆ ಚೆನ್ನಾಗಿ ಮಾಲೀಷು ಮಾಡಬೇಕು.

ವೃದ್ಧರಿಗೆ ಮತ್ತು ನ್ಯುಮೋನಿಯಾ ಪೀಡಿತ ಚಿಕ್ಕ ಮಕ್ಕಳಿಗೂ ಇದು ಉಪಯುಕ್ತ. ವಾತ ಪೀಡಿತ ರೋಗಿಗಳು ಗೋಧಿ ಹಿಟ್ಟಿನಲ್ಲಿ ಮೆಂತೆ ಸೊಪ್ಪು, ಓಂ ಕಾಳು, ಬೆಳ್ಳುಳ್ಳಿ, ಈರುಳ್ಳಿ ಮತ್ತು ಹಸಿಶುಂಠಿ ಬೆರೆಸಿ ತಯಾರಿಸಿದ ಪರಾಠಾ ಸೇವಿಸಬೇಕು. ನೆಲ್ಲಿಕಾಯಿಯ ಸೇವನೆ ಈ ಋತುವಿಗೆ ತುಂಬಾ ಉಪಯುಕ್ತ. ಆದ್ದರಿಂದ ಯಾವುದೇ ರೂಪದಲ್ಲಾಗಲೀ ನೆಲ್ಲಿಕಾಯಿಯ ಸೇವನೆ ಮಾಡಬೇಕು. ಯಾವುದೇ ಔಷಧಿ ಸೇವಿಸಲು ಚಳಿಗಾಲ ಉತ್ತಮವಾದ ಕಾಲ. ಆದ್ದರಿಂದ ದೀರ್ಘ ಕಾಲದಿಂದ ಬಳಲುತ್ತಿರುವ ರೋಗಿಗಳಿಗೆ ಚಳಿಗಾಲದಲ್ಲಿ ಔಷಧ ಸೇವನೆ ಪ್ರಾರಂಭಿಸಬಹುದು. ಮಕ್ಕಳಿಗೆ ಹಾಲುಣಿಸುವ ತಾಯಂದಿರು ಪ್ರತಿನಿತ್ಯ ಒಂದು ಚಮಚ ಓಂ ಕಾಳನ್ನು ಸೇವಿಸಬೇಕು. ಇದರಿಂದ ಮಗುವಿಗೆ ಅಪಚನ ಆಗುವುದಿಲ್ಲ.

ತಪ್ಪದೆ ಈ ಟಿಪ್ಸ್ ಪಾಲಿಸಿ :
ಕೊಬ್ಬರಿ ಎಣ್ಣೆ ಮಸಾಜ್ ಅಥವಾ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದ ಮೈ ಬಿರುಕು, ಒಣ ಚರ್ಮದ ತೊಂದರೆ ಕಡಿಮೆಯಾಗುತ್ತದೆ. ಎಣ್ಣೆ ಸ್ನಾನದಿಂದಲೂ ಚರ್ಮದ ಒಣಗುವಿಕೆ ಹೋಗಿಲ್ಲವಾದಲ್ಲಿ ಸ್ನಾನದ ಬಳಿಕ ಸ್ವಲ್ಪ ಕೊಬ್ಬರಿ ಎಣ್ಣೆಯೊಂದಿಗೆ ಸ್ವಲ್ಪ ಮಾಶ್ಚುರೈಸರ್ ಅಥವಾ ಲೋಶನ್ ನ್ನು ಮಿಶ್ರಣ ಮಾಡಿ ಹಚ್ಚಿಕೊಳ್ಳಬಹುದು. ಬಾದಾಮಿ ಎಣ್ಣೆಯನ್ನು ರಾತ್ರಿ ಹಚ್ಚಿ ಮಲಗಿದರೆ, ಬೆಳಿಗ್ಗೆ ಚರ್ಮ ಒಣಗುವುದಿಲ್ಲ. ಕಾಂತಿಯುತವಾಗಿರುತ್ತದೆ. ಇದು ಡಿ ಜೀವಸತ್ವ ಹೊಂದಿದ್ದು, ಚರ್ಮವನ್ನು ಆರೋಗ್ಯಕರವಾಗಿಡುತ್ತದೆ. ಆದರೆ ಅಲರ್ಜಿ ಇರುವವರು ಇದನ್ನು ಬಳಸದಿರುವುದು ಒಳ್ಳೆಯದು. ದ್ರಾಕ್ಷಿ ಬೀಜದ ಎಣ್ಣೆ ಇದು ವಿಟಮಿನ್ ಇ ಅಂಶವನ್ನು ಹೊಂದಿದ್ದು, ಪೋಷಣೆಯನ್ನು ಒದಗಿಸುವ ಮೂಲಕ ಚರ್ಮವನ್ನು ಆರೋಗ್ಯಕರವಾಗಿಡುತ್ತದೆ.

ಸೋಯಾ ಎಣ್ಣೆ ಇದು ಚರ್ಮದ ತೇವಾಂಶವನ್ನು ಕಾಪಾಡುವ ಜೊತೆಗೆ ಮೃದುವಾದ ಮತ್ತು ದೀರ್ಘಕಾಲದ ಹೊಳಪನ್ನು ನೀಡುತ್ತದೆ. ಹಾಲಿನ ಕೆನೆ ಅಥವಾ ಮೊಸರಿನ ಕೆನೆಯನ್ನು ಹಚ್ಚಿ ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದಲೂ ಚರ್ಮದ ರಕ್ಷಣೆ ಮಾದಬಹುದು.

ಒಂದೆರಡು ಚಮಚ ಜೇನಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯುವುದು. ತೆಂಗಿನಕಾಯಿ ತುರಿದು ರುಬ್ಬಿ ರಸ ತೆಗೆಯಿರಿ. ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದು. ಯಥೇಚ್ಛವಾಗಿ ನೀರು ಕುಡಿಯಬೇಕು. ಸಾಕಷ್ಟು ತರಕಾರಿ, ಹಣ್ಣು ಸೇವನೆ ಇದರಿಂದ ಚರ್ಮ ತೇವಾಂಶ ಹೊಂದಲು ಸಹಕಾರಿಯಾಗುತ್ತದೆ. ಸ್ನಾನಕ್ಕೆ ಅತಿ ಬಿಸಿಯಾದ ನೀರಿಗಿಂತ ಉಗುರು ಬೆಚ್ಚಗಿನ ನೀರು ಬಳಸುವುದು. ಶುಷ್ಕತೆ ಹೆಚ್ಚಿಸದ ಸೌಮ್ಯವಾದ ಸೋಪ್ ಗಳ ಉಪಯೋಗ. ಸ್ನಾನದ ನಂತರ ಮೃದು ಬಟ್ಟೆಯಲ್ಲಿ ಮೈ ಒರೆಸಿಕೊಳ್ಳುವುದು ಹಾಗೂ ನಂತರ ಲೋಷನ್ ಹಚ್ಚಿಕೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನ್ಯಾಯಾಲಯದ ಈ ಪ್ರಕರಣಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ! ಮುಂದೆ ಸಿಗೋದು ಇಲ್ಲ!ಇನ್ನೂ ವಾದ ನಡೀತಾ ಇದೆ!ಯಾಕೆ ಗೊತ್ತಾ?ಈ ಲೇಖನಿ ಓದಿ…

    ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…