ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು.
ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ ನಾವು ಆರೋಗ್ಯವಂತರಾಗಿರಲು ಹೆಚ್ಚಿನ ಭಾಗ ಪ್ರಕೃತಿಯೇ ನಮಗೆ ಸಹಾಯಕವಾಗಿದೆ. ಈ ಕಾಲದಲ್ಲಿ ಸೂರ್ಯನು ದಕ್ಷಿಣಾಯನದಲ್ಲಿ ಇರುವುದರಿಂದ ಹಗಲುಗಳು ಕಿರಿದಾಗಿದ್ದು, ರಾತ್ರಿಗಳು ದೀರ್ಘವಾಗಿರುತ್ತವೆ. ಇದರಿಂದ ದೇಹದ ವಿಶ್ರಾಂತಿಗೆ ಸಾಕಷ್ಟು ಸಮಯ ದೊರೆಯುತ್ತದೆ. ಈ ಋತುವಿನಲ್ಲಿ ಜಠರಾಗ್ನಿಯೂ ಪ್ರಖರವಾಗಿ ಇರುವುದರಿಂದ ಸೇವಿಸಿದ ಆಹಾರ ಚೆನ್ನಾಗಿ ಪಚನವಾಗುತ್ತದೆ.
ನಮ್ಮ ದೇಶದಲ್ಲಿ ಚಳಿಗಾಲವು ಶರದ್ ಋತುವಿನಿಂದ ಆರಂಭವಾಗುತ್ತದೆ. ಆದ್ದರಿಂದ ಶರೀರವನ್ನು ಬೆಚ್ಚಗಿಡಲು ಉಣ್ಣೆ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಹದಲ್ಲಿ ಶಾಖವನ್ನು ಉತ್ಪತ್ತಿ ಮಾಡುವ ಆಹಾರ ಪದಾರ್ಥಗಳನ್ನು ಸೇವಿಸಬೇಕಾಗುತ್ತದೆ. ಈ ಋತುವಿನಲ್ಲಿ ಹಸಿವು ಜಾಸ್ತಿಯಾಗುವುದರಿಂದ ಕಾಲಕಾಲಕ್ಕೆ ಶರೀರಕ್ಕೆ ಆಹಾರ ಪೂರೈಸಬೇಕಾಗುತ್ತದೆ. ಉದ್ದೇಶಪೂರ್ವಕವಾಗಿ ಹಸಿವನ್ನು ತಡೆಯಲು ಪ್ರಯತ್ನಿಸುವುದು ದೇಹಕ್ಕೆ ಹಾನಿ ಉಂಟು ಮಾಡಬಹುದು. ಹಾಗೆ ಮಾಡುವುದರಿಂದ ಜಠರಾಗ್ನಿಯು ರಕ್ತ, ಮಾಂಸ, ಧಾತು ಹಾಗೂ ರಸಗಳನ್ನು ದಹಿಸಿ ಶರೀರ ಕೃಷವಾಗಬಹುದು ಮತ್ತು ವಾಯುಪ್ರಕೋಪ ಹೆಚ್ಚಬಹುದು.
ಚಳಿಗಾಲದಲ್ಲಿ ವಾಯು ಪ್ರಕೋಪ ಮತ್ತು ಕಫ ಸಂಚಯ ಆಗುವುದರಿಂದ ಅವುಗಳನ್ನು ಹೆಚ್ಚಿಸುವ ಪದಾರ್ಥಗಳ ಸೇವನೆ ವರ್ಜಿಸಬೇಕು. ಸಿಹಿ, ಆಮ್ಲ ಮತ್ತು ಲವಣಯುಕ್ತ ಆಹಾರಗಳನ್ನು ಸೇವಿಸಬೇಕು. ಈ ಕಾಲದಲ್ಲಿ ಬಿಸಿಯಾದ ಪದಾರ್ಥಗಳನ್ನು ಸೇವಿಸುವುದು ಹೆಚ್ಚು ಹಿತ ಎನಿಸುತ್ತದೆ. ಆದ್ದರಿಂದ ಚಹಾ ಹಾಗೂ ಕಾಫಿಯನ್ನು ನಾವು ಹೆಚ್ಚಾಗಿ ಸೇವಿಸುತ್ತೇವೆ. ಆದರೆ ಅದು ಆರೋಗ್ಯಕ್ಕೆ ಒಳ್ಳೆಯದಲ್ಲ. ಚಹಾ, ಕಾಫಿಗಳ ಅತಿಯಾದ ಸೇವನೆ ವಾಯು ಪ್ರಕೋಪವನ್ನು ಹೆಚ್ಚಿಸುತ್ತದೆ. ಅದಕ್ಕೆ ಬದಲಾಗಿ ಬಿಸಿ ಸೂಪ್ಗಳನ್ನು ಕುಡಿಯಬಹುದು.
ಚಳಿಗಾಲದಲ್ಲಿ ಕ್ಯಾರೆಟ್, ಮೂಲಂಗಿ, ಗೆಣಸು ಮುಂತಾದ ಗೆಡ್ಡೆಗಳು, ಮೆಂತೆ ಪಲ್ಲೆ, ಬಸಳೆ ಸೊಪ್ಪು, ರಾಜಗಿರಿ ಸೊಪ್ಪು, ಪಾಲಕ್, ಸಬ್ಬಸಿಗೆ ಮುಂತಾದ ಸೊಪ್ಪುಗಳು, ತರಕಾರಿಗಳನ್ನು ಸೇವಿಸುವುದು ಒಳ್ಳೆಯದು. ಈ ಋತುವಿನಲ್ಲಿ ಚರ್ಮದಲ್ಲಿ ಜಿಡ್ಡಿನ ಅಂಶ ಕಡಿಮೆ ಆಗುವುದರಿಂದ ಜಿಡ್ಡನ್ನು ಪೂರೈಸುವ ಆಹಾರ ಪದಾರ್ಥ ಸೇವಿಸಬೇಕು. ಹಾಲು, ತುಪ್ಪ, ಬೆಣ್ಣೆ, ಕೆನೆ, ಗೋಡಂಬಿ, ಕಲ್ಲುಸಕ್ಕರೆ, ಬಾದಾಮಿ, ಗಜ್ಜರಿ ಹಲ್ವ, ಬಾಸುಂದಿ, ಒಣ ಕೊಬ್ಬರಿ, ಬೆಲ್ಲ ಮುಂತಾದ ಪದಾರ್ಥಗಳನ್ನು ಸೇವಿಸಬೇಕು.
ಶರೀರದ ಉಷ್ಣತೆ ಕಾಪಾಡಿಕೊಳ್ಳಲು ಹೆಚ್ಚು ಕ್ಯಾಲೊರಿಗಳ ಅವಶ್ಯಕತೆ ಇರುವುದರಿಂದ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬಹುದು. ಈ ಋತುವಿನಲ್ಲಿ ಬರುವ ಹಣ್ಣುಗಳಾದ ಸೀತಾಫಲ, ಪಪ್ಪಾಯಿ, ಕಿತ್ತಳೆ, ಪೇರು ಮುಂತಾದ ಹಣ್ಣುಗಳನ್ನು ಸೇವಿಸಬೇಕು. ತರಕಾರಿಗಳಲ್ಲಿ ಹೂಕೋಸು ವರ್ಜ್ಯ. ಏಕೆಂದರೆ ಅದು ಕೀಲುನೋವನ್ನು ಉಂಟುಮಾಡುತ್ತದೆ.
ರಾತ್ರಿ ತುಂಬಾ ತಡವಾಗಿ ಊಟಮಾಡುವುದು, ಮುಂಜಾನೆ ತಡಮಾಡಿ ಏಳುವುದು, ಉಪವಾಸ ಮಾಡುವುದು, ತಂಗಳು ಆಹಾರ ಸೇವನೆ ಈ ಋತುವಿಗೆ ತಕ್ಕುದಲ್ಲ. ಇವೆಲ್ಲ ವಾಯು ಪ್ರಕೋಪ ಹೆಚ್ಚಿಸುತ್ತವೆ. ವಾತ ಹಾಗೂ ಪಿತ್ತ ಪ್ರಕೃತಿಯವರಿಗೆ ಈ ಋತು ಸರಿಯಾದುದಲ್ಲ. ಆದ್ದರಿಂದ ಕಫ ಪ್ರಕೃತಿಯವರು ಹುಳಿಯಾದ ಪದಾರ್ಥಗಳು, ಮೊಸರು, ಬಾಳೆಹಣ್ಣನ್ನು ಸೇವಿಸಬಾರದು. ವಾತ ಪ್ರಕೃತಿಯವರು ಅದರಿಂದ ಪಾರಾಗಲು ಮತ್ತು ಶರೀರದಲ್ಲಿ ಸ್ಫೂರ್ತಿ ಹೊಂದಲು ಸಾಸಿವೆ ಎಣ್ಣೆಯಿಂದ ಶರೀರವನ್ನು ಮಸಾಜ್ ಮಾಡಿಕೊಳ್ಳಬೇಕು. ಇದರಿಂದ ಸಂಧಿವಾತ, ಕೀಲುನೋವುಗಳು ಗುಣವಾಗುತ್ತವೆ ಮತ್ತು ತ್ವಚೆಯೂ ಕೋಮಲವಾಗಿ ಇರುತ್ತದೆ. ಕಫ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಿಗಳಿಗೆ ಆಕಳ ತುಪ್ಪದಲ್ಲಿ ಸೈಂಧವ ಲವಣ, ಮೆಂತೆ ಮತ್ತು ಕರ್ಪೂರ ಬೆರೆಸಿ ಎದೆಗೆ ಚೆನ್ನಾಗಿ ಮಾಲೀಷು ಮಾಡಬೇಕು.
ವೃದ್ಧರಿಗೆ ಮತ್ತು ನ್ಯುಮೋನಿಯಾ ಪೀಡಿತ ಚಿಕ್ಕ ಮಕ್ಕಳಿಗೂ ಇದು ಉಪಯುಕ್ತ. ವಾತ ಪೀಡಿತ ರೋಗಿಗಳು ಗೋಧಿ ಹಿಟ್ಟಿನಲ್ಲಿ ಮೆಂತೆ ಸೊಪ್ಪು, ಓಂ ಕಾಳು, ಬೆಳ್ಳುಳ್ಳಿ, ಈರುಳ್ಳಿ ಮತ್ತು ಹಸಿಶುಂಠಿ ಬೆರೆಸಿ ತಯಾರಿಸಿದ ಪರಾಠಾ ಸೇವಿಸಬೇಕು. ನೆಲ್ಲಿಕಾಯಿಯ ಸೇವನೆ ಈ ಋತುವಿಗೆ ತುಂಬಾ ಉಪಯುಕ್ತ. ಆದ್ದರಿಂದ ಯಾವುದೇ ರೂಪದಲ್ಲಾಗಲೀ ನೆಲ್ಲಿಕಾಯಿಯ ಸೇವನೆ ಮಾಡಬೇಕು. ಯಾವುದೇ ಔಷಧಿ ಸೇವಿಸಲು ಚಳಿಗಾಲ ಉತ್ತಮವಾದ ಕಾಲ. ಆದ್ದರಿಂದ ದೀರ್ಘ ಕಾಲದಿಂದ ಬಳಲುತ್ತಿರುವ ರೋಗಿಗಳಿಗೆ ಚಳಿಗಾಲದಲ್ಲಿ ಔಷಧ ಸೇವನೆ ಪ್ರಾರಂಭಿಸಬಹುದು. ಮಕ್ಕಳಿಗೆ ಹಾಲುಣಿಸುವ ತಾಯಂದಿರು ಪ್ರತಿನಿತ್ಯ ಒಂದು ಚಮಚ ಓಂ ಕಾಳನ್ನು ಸೇವಿಸಬೇಕು. ಇದರಿಂದ ಮಗುವಿಗೆ ಅಪಚನ ಆಗುವುದಿಲ್ಲ.
ತಪ್ಪದೆ ಈ ಟಿಪ್ಸ್ ಪಾಲಿಸಿ :
ಕೊಬ್ಬರಿ ಎಣ್ಣೆ ಮಸಾಜ್ ಅಥವಾ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದ ಮೈ ಬಿರುಕು, ಒಣ ಚರ್ಮದ ತೊಂದರೆ ಕಡಿಮೆಯಾಗುತ್ತದೆ. ಎಣ್ಣೆ ಸ್ನಾನದಿಂದಲೂ ಚರ್ಮದ ಒಣಗುವಿಕೆ ಹೋಗಿಲ್ಲವಾದಲ್ಲಿ ಸ್ನಾನದ ಬಳಿಕ ಸ್ವಲ್ಪ ಕೊಬ್ಬರಿ ಎಣ್ಣೆಯೊಂದಿಗೆ ಸ್ವಲ್ಪ ಮಾಶ್ಚುರೈಸರ್ ಅಥವಾ ಲೋಶನ್ ನ್ನು ಮಿಶ್ರಣ ಮಾಡಿ ಹಚ್ಚಿಕೊಳ್ಳಬಹುದು. ಬಾದಾಮಿ ಎಣ್ಣೆಯನ್ನು ರಾತ್ರಿ ಹಚ್ಚಿ ಮಲಗಿದರೆ, ಬೆಳಿಗ್ಗೆ ಚರ್ಮ ಒಣಗುವುದಿಲ್ಲ. ಕಾಂತಿಯುತವಾಗಿರುತ್ತದೆ. ಇದು ಡಿ ಜೀವಸತ್ವ ಹೊಂದಿದ್ದು, ಚರ್ಮವನ್ನು ಆರೋಗ್ಯಕರವಾಗಿಡುತ್ತದೆ. ಆದರೆ ಅಲರ್ಜಿ ಇರುವವರು ಇದನ್ನು ಬಳಸದಿರುವುದು ಒಳ್ಳೆಯದು. ದ್ರಾಕ್ಷಿ ಬೀಜದ ಎಣ್ಣೆ ಇದು ವಿಟಮಿನ್ ಇ ಅಂಶವನ್ನು ಹೊಂದಿದ್ದು, ಪೋಷಣೆಯನ್ನು ಒದಗಿಸುವ ಮೂಲಕ ಚರ್ಮವನ್ನು ಆರೋಗ್ಯಕರವಾಗಿಡುತ್ತದೆ.
ಸೋಯಾ ಎಣ್ಣೆ ಇದು ಚರ್ಮದ ತೇವಾಂಶವನ್ನು ಕಾಪಾಡುವ ಜೊತೆಗೆ ಮೃದುವಾದ ಮತ್ತು ದೀರ್ಘಕಾಲದ ಹೊಳಪನ್ನು ನೀಡುತ್ತದೆ. ಹಾಲಿನ ಕೆನೆ ಅಥವಾ ಮೊಸರಿನ ಕೆನೆಯನ್ನು ಹಚ್ಚಿ ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದಲೂ ಚರ್ಮದ ರಕ್ಷಣೆ ಮಾದಬಹುದು.
ಒಂದೆರಡು ಚಮಚ ಜೇನಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯುವುದು. ತೆಂಗಿನಕಾಯಿ ತುರಿದು ರುಬ್ಬಿ ರಸ ತೆಗೆಯಿರಿ. ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದು. ಯಥೇಚ್ಛವಾಗಿ ನೀರು ಕುಡಿಯಬೇಕು. ಸಾಕಷ್ಟು ತರಕಾರಿ, ಹಣ್ಣು ಸೇವನೆ ಇದರಿಂದ ಚರ್ಮ ತೇವಾಂಶ ಹೊಂದಲು ಸಹಕಾರಿಯಾಗುತ್ತದೆ. ಸ್ನಾನಕ್ಕೆ ಅತಿ ಬಿಸಿಯಾದ ನೀರಿಗಿಂತ ಉಗುರು ಬೆಚ್ಚಗಿನ ನೀರು ಬಳಸುವುದು. ಶುಷ್ಕತೆ ಹೆಚ್ಚಿಸದ ಸೌಮ್ಯವಾದ ಸೋಪ್ ಗಳ ಉಪಯೋಗ. ಸ್ನಾನದ ನಂತರ ಮೃದು ಬಟ್ಟೆಯಲ್ಲಿ ಮೈ ಒರೆಸಿಕೊಳ್ಳುವುದು ಹಾಗೂ ನಂತರ ಲೋಷನ್ ಹಚ್ಚಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….