News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

69


ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು.

ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ ನಾವು ಆರೋಗ್ಯವಂತರಾಗಿರಲು ಹೆಚ್ಚಿನ ಭಾಗ ಪ್ರಕೃತಿಯೇ ನಮಗೆ ಸಹಾಯಕವಾಗಿದೆ. ಈ ಕಾಲದಲ್ಲಿ ಸೂರ್ಯನು ದಕ್ಷಿಣಾಯನದಲ್ಲಿ ಇರುವುದರಿಂದ ಹಗಲುಗಳು ಕಿರಿದಾಗಿದ್ದು, ರಾತ್ರಿಗಳು ದೀರ್ಘವಾಗಿರುತ್ತವೆ. ಇದರಿಂದ ದೇಹದ ವಿಶ್ರಾಂತಿಗೆ ಸಾಕಷ್ಟು ಸಮಯ ದೊರೆಯುತ್ತದೆ. ಈ ಋತುವಿನಲ್ಲಿ ಜಠರಾಗ್ನಿಯೂ ಪ್ರಖರವಾಗಿ ಇರುವುದರಿಂದ ಸೇವಿಸಿದ ಆಹಾರ ಚೆನ್ನಾಗಿ ಪಚನವಾಗುತ್ತದೆ.

ನಮ್ಮ ದೇಶದಲ್ಲಿ ಚಳಿಗಾಲವು ಶರದ್ ಋತುವಿನಿಂದ ಆರಂಭವಾಗುತ್ತದೆ. ಆದ್ದರಿಂದ ಶರೀರವನ್ನು ಬೆಚ್ಚಗಿಡಲು ಉಣ್ಣೆ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಹದಲ್ಲಿ ಶಾಖವನ್ನು ಉತ್ಪತ್ತಿ ಮಾಡುವ ಆಹಾರ ಪದಾರ್ಥಗಳನ್ನು ಸೇವಿಸಬೇಕಾಗುತ್ತದೆ.  ಈ ಋತುವಿನಲ್ಲಿ ಹಸಿವು ಜಾಸ್ತಿಯಾಗುವುದರಿಂದ ಕಾಲಕಾಲಕ್ಕೆ ಶರೀರಕ್ಕೆ ಆಹಾರ ಪೂರೈಸಬೇಕಾಗುತ್ತದೆ. ಉದ್ದೇಶಪೂರ್ವಕವಾಗಿ ಹಸಿವನ್ನು ತಡೆಯಲು ಪ್ರಯತ್ನಿಸುವುದು ದೇಹಕ್ಕೆ ಹಾನಿ ಉಂಟು ಮಾಡಬಹುದು. ಹಾಗೆ ಮಾಡುವುದರಿಂದ ಜಠರಾಗ್ನಿಯು ರಕ್ತ, ಮಾಂಸ, ಧಾತು ಹಾಗೂ ರಸಗಳನ್ನು ದಹಿಸಿ ಶರೀರ ಕೃಷವಾಗಬಹುದು ಮತ್ತು ವಾಯುಪ್ರಕೋಪ ಹೆಚ್ಚಬಹುದು.

ಚಳಿಗಾಲದಲ್ಲಿ ವಾಯು ಪ್ರಕೋಪ ಮತ್ತು ಕಫ ಸಂಚಯ ಆಗುವುದರಿಂದ ಅವುಗಳನ್ನು ಹೆಚ್ಚಿಸುವ ಪದಾರ್ಥಗಳ ಸೇವನೆ ವರ್ಜಿಸಬೇಕು. ಸಿಹಿ, ಆಮ್ಲ ಮತ್ತು ಲವಣಯುಕ್ತ ಆಹಾರಗಳನ್ನು ಸೇವಿಸಬೇಕು. ಈ ಕಾಲದಲ್ಲಿ ಬಿಸಿಯಾದ ಪದಾರ್ಥಗಳನ್ನು ಸೇವಿಸುವುದು ಹೆಚ್ಚು ಹಿತ ಎನಿಸುತ್ತದೆ. ಆದ್ದರಿಂದ ಚಹಾ ಹಾಗೂ ಕಾಫಿಯನ್ನು ನಾವು ಹೆಚ್ಚಾಗಿ ಸೇವಿಸುತ್ತೇವೆ. ಆದರೆ ಅದು ಆರೋಗ್ಯಕ್ಕೆ ಒಳ್ಳೆಯದಲ್ಲ. ಚಹಾ, ಕಾಫಿಗಳ ಅತಿಯಾದ ಸೇವನೆ ವಾಯು ಪ್ರಕೋಪವನ್ನು ಹೆಚ್ಚಿಸುತ್ತದೆ. ಅದಕ್ಕೆ ಬದಲಾಗಿ ಬಿಸಿ ಸೂಪ್‌ಗಳನ್ನು ಕುಡಿಯಬಹುದು.

ಚಳಿಗಾಲದಲ್ಲಿ ಕ್ಯಾರೆಟ್, ಮೂಲಂಗಿ, ಗೆಣಸು ಮುಂತಾದ ಗೆಡ್ಡೆಗಳು, ಮೆಂತೆ ಪಲ್ಲೆ, ಬಸಳೆ ಸೊಪ್ಪು, ರಾಜಗಿರಿ ಸೊಪ್ಪು, ಪಾಲಕ್, ಸಬ್ಬಸಿಗೆ ಮುಂತಾದ ಸೊಪ್ಪುಗಳು, ತರಕಾರಿಗಳನ್ನು ಸೇವಿಸುವುದು ಒಳ್ಳೆಯದು. ಈ ಋತುವಿನಲ್ಲಿ ಚರ್ಮದಲ್ಲಿ ಜಿಡ್ಡಿನ ಅಂಶ ಕಡಿಮೆ ಆಗುವುದರಿಂದ ಜಿಡ್ಡನ್ನು ಪೂರೈಸುವ ಆಹಾರ ಪದಾರ್ಥ ಸೇವಿಸಬೇಕು. ಹಾಲು, ತುಪ್ಪ, ಬೆಣ್ಣೆ, ಕೆನೆ, ಗೋಡಂಬಿ, ಕಲ್ಲುಸಕ್ಕರೆ, ಬಾದಾಮಿ, ಗಜ್ಜರಿ ಹಲ್ವ, ಬಾಸುಂದಿ, ಒಣ ಕೊಬ್ಬರಿ, ಬೆಲ್ಲ ಮುಂತಾದ ಪದಾರ್ಥಗಳನ್ನು ಸೇವಿಸಬೇಕು.

ಶರೀರದ ಉಷ್ಣತೆ ಕಾಪಾಡಿಕೊಳ್ಳಲು ಹೆಚ್ಚು ಕ್ಯಾಲೊರಿಗಳ ಅವಶ್ಯಕತೆ ಇರುವುದರಿಂದ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬಹುದು. ಈ ಋತುವಿನಲ್ಲಿ ಬರುವ ಹಣ್ಣುಗಳಾದ ಸೀತಾಫಲ, ಪಪ್ಪಾಯಿ, ಕಿತ್ತಳೆ, ಪೇರು ಮುಂತಾದ ಹಣ್ಣುಗಳನ್ನು ಸೇವಿಸಬೇಕು. ತರಕಾರಿಗಳಲ್ಲಿ ಹೂಕೋಸು ವರ್ಜ್ಯ. ಏಕೆಂದರೆ ಅದು ಕೀಲುನೋವನ್ನು ಉಂಟುಮಾಡುತ್ತದೆ.

ರಾತ್ರಿ ತುಂಬಾ ತಡವಾಗಿ ಊಟಮಾಡುವುದು, ಮುಂಜಾನೆ ತಡಮಾಡಿ ಏಳುವುದು, ಉಪವಾಸ ಮಾಡುವುದು, ತಂಗಳು ಆಹಾರ ಸೇವನೆ ಈ ಋತುವಿಗೆ ತಕ್ಕುದಲ್ಲ. ಇವೆಲ್ಲ ವಾಯು ಪ್ರಕೋಪ ಹೆಚ್ಚಿಸುತ್ತವೆ.  ವಾತ ಹಾಗೂ ಪಿತ್ತ ಪ್ರಕೃತಿಯವರಿಗೆ ಈ ಋತು ಸರಿಯಾದುದಲ್ಲ. ಆದ್ದರಿಂದ ಕಫ ಪ್ರಕೃತಿಯವರು ಹುಳಿಯಾದ ಪದಾರ್ಥಗಳು, ಮೊಸರು, ಬಾಳೆಹಣ್ಣನ್ನು ಸೇವಿಸಬಾರದು.  ವಾತ ಪ್ರಕೃತಿಯವರು ಅದರಿಂದ ಪಾರಾಗಲು ಮತ್ತು ಶರೀರದಲ್ಲಿ ಸ್ಫೂರ್ತಿ ಹೊಂದಲು ಸಾಸಿವೆ ಎಣ್ಣೆಯಿಂದ ಶರೀರವನ್ನು ಮಸಾಜ್ ಮಾಡಿಕೊಳ್ಳಬೇಕು. ಇದರಿಂದ ಸಂಧಿವಾತ, ಕೀಲುನೋವುಗಳು ಗುಣವಾಗುತ್ತವೆ ಮತ್ತು ತ್ವಚೆಯೂ ಕೋಮಲವಾಗಿ ಇರುತ್ತದೆ. ಕಫ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಿಗಳಿಗೆ ಆಕಳ ತುಪ್ಪದಲ್ಲಿ ಸೈಂಧವ ಲವಣ, ಮೆಂತೆ ಮತ್ತು ಕರ್ಪೂರ ಬೆರೆಸಿ ಎದೆಗೆ ಚೆನ್ನಾಗಿ ಮಾಲೀಷು ಮಾಡಬೇಕು.

ವೃದ್ಧರಿಗೆ ಮತ್ತು ನ್ಯುಮೋನಿಯಾ ಪೀಡಿತ ಚಿಕ್ಕ ಮಕ್ಕಳಿಗೂ ಇದು ಉಪಯುಕ್ತ. ವಾತ ಪೀಡಿತ ರೋಗಿಗಳು ಗೋಧಿ ಹಿಟ್ಟಿನಲ್ಲಿ ಮೆಂತೆ ಸೊಪ್ಪು, ಓಂ ಕಾಳು, ಬೆಳ್ಳುಳ್ಳಿ, ಈರುಳ್ಳಿ ಮತ್ತು ಹಸಿಶುಂಠಿ ಬೆರೆಸಿ ತಯಾರಿಸಿದ ಪರಾಠಾ ಸೇವಿಸಬೇಕು. ನೆಲ್ಲಿಕಾಯಿಯ ಸೇವನೆ ಈ ಋತುವಿಗೆ ತುಂಬಾ ಉಪಯುಕ್ತ. ಆದ್ದರಿಂದ ಯಾವುದೇ ರೂಪದಲ್ಲಾಗಲೀ ನೆಲ್ಲಿಕಾಯಿಯ ಸೇವನೆ ಮಾಡಬೇಕು. ಯಾವುದೇ ಔಷಧಿ ಸೇವಿಸಲು ಚಳಿಗಾಲ ಉತ್ತಮವಾದ ಕಾಲ. ಆದ್ದರಿಂದ ದೀರ್ಘ ಕಾಲದಿಂದ ಬಳಲುತ್ತಿರುವ ರೋಗಿಗಳಿಗೆ ಚಳಿಗಾಲದಲ್ಲಿ ಔಷಧ ಸೇವನೆ ಪ್ರಾರಂಭಿಸಬಹುದು. ಮಕ್ಕಳಿಗೆ ಹಾಲುಣಿಸುವ ತಾಯಂದಿರು ಪ್ರತಿನಿತ್ಯ ಒಂದು ಚಮಚ ಓಂ ಕಾಳನ್ನು ಸೇವಿಸಬೇಕು. ಇದರಿಂದ ಮಗುವಿಗೆ ಅಪಚನ ಆಗುವುದಿಲ್ಲ.

ತಪ್ಪದೆ ಈ ಟಿಪ್ಸ್ ಪಾಲಿಸಿ :
ಕೊಬ್ಬರಿ ಎಣ್ಣೆ ಮಸಾಜ್ ಅಥವಾ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದ ಮೈ ಬಿರುಕು, ಒಣ ಚರ್ಮದ ತೊಂದರೆ ಕಡಿಮೆಯಾಗುತ್ತದೆ. ಎಣ್ಣೆ ಸ್ನಾನದಿಂದಲೂ ಚರ್ಮದ ಒಣಗುವಿಕೆ ಹೋಗಿಲ್ಲವಾದಲ್ಲಿ ಸ್ನಾನದ ಬಳಿಕ ಸ್ವಲ್ಪ ಕೊಬ್ಬರಿ ಎಣ್ಣೆಯೊಂದಿಗೆ ಸ್ವಲ್ಪ ಮಾಶ್ಚುರೈಸರ್ ಅಥವಾ ಲೋಶನ್ ನ್ನು ಮಿಶ್ರಣ ಮಾಡಿ ಹಚ್ಚಿಕೊಳ್ಳಬಹುದು. ಬಾದಾಮಿ ಎಣ್ಣೆಯನ್ನು ರಾತ್ರಿ ಹಚ್ಚಿ ಮಲಗಿದರೆ, ಬೆಳಿಗ್ಗೆ ಚರ್ಮ ಒಣಗುವುದಿಲ್ಲ. ಕಾಂತಿಯುತವಾಗಿರುತ್ತದೆ. ಇದು ಡಿ ಜೀವಸತ್ವ ಹೊಂದಿದ್ದು, ಚರ್ಮವನ್ನು ಆರೋಗ್ಯಕರವಾಗಿಡುತ್ತದೆ. ಆದರೆ ಅಲರ್ಜಿ ಇರುವವರು ಇದನ್ನು ಬಳಸದಿರುವುದು ಒಳ್ಳೆಯದು. ದ್ರಾಕ್ಷಿ ಬೀಜದ ಎಣ್ಣೆ ಇದು ವಿಟಮಿನ್ ಇ ಅಂಶವನ್ನು ಹೊಂದಿದ್ದು, ಪೋಷಣೆಯನ್ನು ಒದಗಿಸುವ ಮೂಲಕ ಚರ್ಮವನ್ನು ಆರೋಗ್ಯಕರವಾಗಿಡುತ್ತದೆ.

ಸೋಯಾ ಎಣ್ಣೆ ಇದು ಚರ್ಮದ ತೇವಾಂಶವನ್ನು ಕಾಪಾಡುವ ಜೊತೆಗೆ ಮೃದುವಾದ ಮತ್ತು ದೀರ್ಘಕಾಲದ ಹೊಳಪನ್ನು ನೀಡುತ್ತದೆ. ಹಾಲಿನ ಕೆನೆ ಅಥವಾ ಮೊಸರಿನ ಕೆನೆಯನ್ನು ಹಚ್ಚಿ ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದಲೂ ಚರ್ಮದ ರಕ್ಷಣೆ ಮಾದಬಹುದು.

ಒಂದೆರಡು ಚಮಚ ಜೇನಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯುವುದು. ತೆಂಗಿನಕಾಯಿ ತುರಿದು ರುಬ್ಬಿ ರಸ ತೆಗೆಯಿರಿ. ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದು. ಯಥೇಚ್ಛವಾಗಿ ನೀರು ಕುಡಿಯಬೇಕು. ಸಾಕಷ್ಟು ತರಕಾರಿ, ಹಣ್ಣು ಸೇವನೆ ಇದರಿಂದ ಚರ್ಮ ತೇವಾಂಶ ಹೊಂದಲು ಸಹಕಾರಿಯಾಗುತ್ತದೆ. ಸ್ನಾನಕ್ಕೆ ಅತಿ ಬಿಸಿಯಾದ ನೀರಿಗಿಂತ ಉಗುರು ಬೆಚ್ಚಗಿನ ನೀರು ಬಳಸುವುದು. ಶುಷ್ಕತೆ ಹೆಚ್ಚಿಸದ ಸೌಮ್ಯವಾದ ಸೋಪ್ ಗಳ ಉಪಯೋಗ. ಸ್ನಾನದ ನಂತರ ಮೃದು ಬಟ್ಟೆಯಲ್ಲಿ ಮೈ ಒರೆಸಿಕೊಳ್ಳುವುದು ಹಾಗೂ ನಂತರ ಲೋಷನ್ ಹಚ್ಚಿಕೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ದೇಶ-ವಿದೇಶ

    ಮೋದಿ ಸರ್ಕಾರದ ಈ ಯೋಜನೆ ಜಾರಿಗೆ ಬಂದ್ರೆ ನಿಲ್ಲಲಿದೆ ಕರೆಂಟ್ ಕಳ್ಳತನ!ಬರಲಿದೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍…

    ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್‍ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….