ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು.
ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ ನಾವು ಆರೋಗ್ಯವಂತರಾಗಿರಲು ಹೆಚ್ಚಿನ ಭಾಗ ಪ್ರಕೃತಿಯೇ ನಮಗೆ ಸಹಾಯಕವಾಗಿದೆ. ಈ ಕಾಲದಲ್ಲಿ ಸೂರ್ಯನು ದಕ್ಷಿಣಾಯನದಲ್ಲಿ ಇರುವುದರಿಂದ ಹಗಲುಗಳು ಕಿರಿದಾಗಿದ್ದು, ರಾತ್ರಿಗಳು ದೀರ್ಘವಾಗಿರುತ್ತವೆ. ಇದರಿಂದ ದೇಹದ ವಿಶ್ರಾಂತಿಗೆ ಸಾಕಷ್ಟು ಸಮಯ ದೊರೆಯುತ್ತದೆ. ಈ ಋತುವಿನಲ್ಲಿ ಜಠರಾಗ್ನಿಯೂ ಪ್ರಖರವಾಗಿ ಇರುವುದರಿಂದ ಸೇವಿಸಿದ ಆಹಾರ ಚೆನ್ನಾಗಿ ಪಚನವಾಗುತ್ತದೆ.
ನಮ್ಮ ದೇಶದಲ್ಲಿ ಚಳಿಗಾಲವು ಶರದ್ ಋತುವಿನಿಂದ ಆರಂಭವಾಗುತ್ತದೆ. ಆದ್ದರಿಂದ ಶರೀರವನ್ನು ಬೆಚ್ಚಗಿಡಲು ಉಣ್ಣೆ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಹದಲ್ಲಿ ಶಾಖವನ್ನು ಉತ್ಪತ್ತಿ ಮಾಡುವ ಆಹಾರ ಪದಾರ್ಥಗಳನ್ನು ಸೇವಿಸಬೇಕಾಗುತ್ತದೆ. ಈ ಋತುವಿನಲ್ಲಿ ಹಸಿವು ಜಾಸ್ತಿಯಾಗುವುದರಿಂದ ಕಾಲಕಾಲಕ್ಕೆ ಶರೀರಕ್ಕೆ ಆಹಾರ ಪೂರೈಸಬೇಕಾಗುತ್ತದೆ. ಉದ್ದೇಶಪೂರ್ವಕವಾಗಿ ಹಸಿವನ್ನು ತಡೆಯಲು ಪ್ರಯತ್ನಿಸುವುದು ದೇಹಕ್ಕೆ ಹಾನಿ ಉಂಟು ಮಾಡಬಹುದು. ಹಾಗೆ ಮಾಡುವುದರಿಂದ ಜಠರಾಗ್ನಿಯು ರಕ್ತ, ಮಾಂಸ, ಧಾತು ಹಾಗೂ ರಸಗಳನ್ನು ದಹಿಸಿ ಶರೀರ ಕೃಷವಾಗಬಹುದು ಮತ್ತು ವಾಯುಪ್ರಕೋಪ ಹೆಚ್ಚಬಹುದು.
ಚಳಿಗಾಲದಲ್ಲಿ ವಾಯು ಪ್ರಕೋಪ ಮತ್ತು ಕಫ ಸಂಚಯ ಆಗುವುದರಿಂದ ಅವುಗಳನ್ನು ಹೆಚ್ಚಿಸುವ ಪದಾರ್ಥಗಳ ಸೇವನೆ ವರ್ಜಿಸಬೇಕು. ಸಿಹಿ, ಆಮ್ಲ ಮತ್ತು ಲವಣಯುಕ್ತ ಆಹಾರಗಳನ್ನು ಸೇವಿಸಬೇಕು. ಈ ಕಾಲದಲ್ಲಿ ಬಿಸಿಯಾದ ಪದಾರ್ಥಗಳನ್ನು ಸೇವಿಸುವುದು ಹೆಚ್ಚು ಹಿತ ಎನಿಸುತ್ತದೆ. ಆದ್ದರಿಂದ ಚಹಾ ಹಾಗೂ ಕಾಫಿಯನ್ನು ನಾವು ಹೆಚ್ಚಾಗಿ ಸೇವಿಸುತ್ತೇವೆ. ಆದರೆ ಅದು ಆರೋಗ್ಯಕ್ಕೆ ಒಳ್ಳೆಯದಲ್ಲ. ಚಹಾ, ಕಾಫಿಗಳ ಅತಿಯಾದ ಸೇವನೆ ವಾಯು ಪ್ರಕೋಪವನ್ನು ಹೆಚ್ಚಿಸುತ್ತದೆ. ಅದಕ್ಕೆ ಬದಲಾಗಿ ಬಿಸಿ ಸೂಪ್ಗಳನ್ನು ಕುಡಿಯಬಹುದು.
ಚಳಿಗಾಲದಲ್ಲಿ ಕ್ಯಾರೆಟ್, ಮೂಲಂಗಿ, ಗೆಣಸು ಮುಂತಾದ ಗೆಡ್ಡೆಗಳು, ಮೆಂತೆ ಪಲ್ಲೆ, ಬಸಳೆ ಸೊಪ್ಪು, ರಾಜಗಿರಿ ಸೊಪ್ಪು, ಪಾಲಕ್, ಸಬ್ಬಸಿಗೆ ಮುಂತಾದ ಸೊಪ್ಪುಗಳು, ತರಕಾರಿಗಳನ್ನು ಸೇವಿಸುವುದು ಒಳ್ಳೆಯದು. ಈ ಋತುವಿನಲ್ಲಿ ಚರ್ಮದಲ್ಲಿ ಜಿಡ್ಡಿನ ಅಂಶ ಕಡಿಮೆ ಆಗುವುದರಿಂದ ಜಿಡ್ಡನ್ನು ಪೂರೈಸುವ ಆಹಾರ ಪದಾರ್ಥ ಸೇವಿಸಬೇಕು. ಹಾಲು, ತುಪ್ಪ, ಬೆಣ್ಣೆ, ಕೆನೆ, ಗೋಡಂಬಿ, ಕಲ್ಲುಸಕ್ಕರೆ, ಬಾದಾಮಿ, ಗಜ್ಜರಿ ಹಲ್ವ, ಬಾಸುಂದಿ, ಒಣ ಕೊಬ್ಬರಿ, ಬೆಲ್ಲ ಮುಂತಾದ ಪದಾರ್ಥಗಳನ್ನು ಸೇವಿಸಬೇಕು.
ಶರೀರದ ಉಷ್ಣತೆ ಕಾಪಾಡಿಕೊಳ್ಳಲು ಹೆಚ್ಚು ಕ್ಯಾಲೊರಿಗಳ ಅವಶ್ಯಕತೆ ಇರುವುದರಿಂದ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬಹುದು. ಈ ಋತುವಿನಲ್ಲಿ ಬರುವ ಹಣ್ಣುಗಳಾದ ಸೀತಾಫಲ, ಪಪ್ಪಾಯಿ, ಕಿತ್ತಳೆ, ಪೇರು ಮುಂತಾದ ಹಣ್ಣುಗಳನ್ನು ಸೇವಿಸಬೇಕು. ತರಕಾರಿಗಳಲ್ಲಿ ಹೂಕೋಸು ವರ್ಜ್ಯ. ಏಕೆಂದರೆ ಅದು ಕೀಲುನೋವನ್ನು ಉಂಟುಮಾಡುತ್ತದೆ.
ರಾತ್ರಿ ತುಂಬಾ ತಡವಾಗಿ ಊಟಮಾಡುವುದು, ಮುಂಜಾನೆ ತಡಮಾಡಿ ಏಳುವುದು, ಉಪವಾಸ ಮಾಡುವುದು, ತಂಗಳು ಆಹಾರ ಸೇವನೆ ಈ ಋತುವಿಗೆ ತಕ್ಕುದಲ್ಲ. ಇವೆಲ್ಲ ವಾಯು ಪ್ರಕೋಪ ಹೆಚ್ಚಿಸುತ್ತವೆ. ವಾತ ಹಾಗೂ ಪಿತ್ತ ಪ್ರಕೃತಿಯವರಿಗೆ ಈ ಋತು ಸರಿಯಾದುದಲ್ಲ. ಆದ್ದರಿಂದ ಕಫ ಪ್ರಕೃತಿಯವರು ಹುಳಿಯಾದ ಪದಾರ್ಥಗಳು, ಮೊಸರು, ಬಾಳೆಹಣ್ಣನ್ನು ಸೇವಿಸಬಾರದು. ವಾತ ಪ್ರಕೃತಿಯವರು ಅದರಿಂದ ಪಾರಾಗಲು ಮತ್ತು ಶರೀರದಲ್ಲಿ ಸ್ಫೂರ್ತಿ ಹೊಂದಲು ಸಾಸಿವೆ ಎಣ್ಣೆಯಿಂದ ಶರೀರವನ್ನು ಮಸಾಜ್ ಮಾಡಿಕೊಳ್ಳಬೇಕು. ಇದರಿಂದ ಸಂಧಿವಾತ, ಕೀಲುನೋವುಗಳು ಗುಣವಾಗುತ್ತವೆ ಮತ್ತು ತ್ವಚೆಯೂ ಕೋಮಲವಾಗಿ ಇರುತ್ತದೆ. ಕಫ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಿಗಳಿಗೆ ಆಕಳ ತುಪ್ಪದಲ್ಲಿ ಸೈಂಧವ ಲವಣ, ಮೆಂತೆ ಮತ್ತು ಕರ್ಪೂರ ಬೆರೆಸಿ ಎದೆಗೆ ಚೆನ್ನಾಗಿ ಮಾಲೀಷು ಮಾಡಬೇಕು.
ವೃದ್ಧರಿಗೆ ಮತ್ತು ನ್ಯುಮೋನಿಯಾ ಪೀಡಿತ ಚಿಕ್ಕ ಮಕ್ಕಳಿಗೂ ಇದು ಉಪಯುಕ್ತ. ವಾತ ಪೀಡಿತ ರೋಗಿಗಳು ಗೋಧಿ ಹಿಟ್ಟಿನಲ್ಲಿ ಮೆಂತೆ ಸೊಪ್ಪು, ಓಂ ಕಾಳು, ಬೆಳ್ಳುಳ್ಳಿ, ಈರುಳ್ಳಿ ಮತ್ತು ಹಸಿಶುಂಠಿ ಬೆರೆಸಿ ತಯಾರಿಸಿದ ಪರಾಠಾ ಸೇವಿಸಬೇಕು. ನೆಲ್ಲಿಕಾಯಿಯ ಸೇವನೆ ಈ ಋತುವಿಗೆ ತುಂಬಾ ಉಪಯುಕ್ತ. ಆದ್ದರಿಂದ ಯಾವುದೇ ರೂಪದಲ್ಲಾಗಲೀ ನೆಲ್ಲಿಕಾಯಿಯ ಸೇವನೆ ಮಾಡಬೇಕು. ಯಾವುದೇ ಔಷಧಿ ಸೇವಿಸಲು ಚಳಿಗಾಲ ಉತ್ತಮವಾದ ಕಾಲ. ಆದ್ದರಿಂದ ದೀರ್ಘ ಕಾಲದಿಂದ ಬಳಲುತ್ತಿರುವ ರೋಗಿಗಳಿಗೆ ಚಳಿಗಾಲದಲ್ಲಿ ಔಷಧ ಸೇವನೆ ಪ್ರಾರಂಭಿಸಬಹುದು. ಮಕ್ಕಳಿಗೆ ಹಾಲುಣಿಸುವ ತಾಯಂದಿರು ಪ್ರತಿನಿತ್ಯ ಒಂದು ಚಮಚ ಓಂ ಕಾಳನ್ನು ಸೇವಿಸಬೇಕು. ಇದರಿಂದ ಮಗುವಿಗೆ ಅಪಚನ ಆಗುವುದಿಲ್ಲ.
ತಪ್ಪದೆ ಈ ಟಿಪ್ಸ್ ಪಾಲಿಸಿ :
ಕೊಬ್ಬರಿ ಎಣ್ಣೆ ಮಸಾಜ್ ಅಥವಾ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದ ಮೈ ಬಿರುಕು, ಒಣ ಚರ್ಮದ ತೊಂದರೆ ಕಡಿಮೆಯಾಗುತ್ತದೆ. ಎಣ್ಣೆ ಸ್ನಾನದಿಂದಲೂ ಚರ್ಮದ ಒಣಗುವಿಕೆ ಹೋಗಿಲ್ಲವಾದಲ್ಲಿ ಸ್ನಾನದ ಬಳಿಕ ಸ್ವಲ್ಪ ಕೊಬ್ಬರಿ ಎಣ್ಣೆಯೊಂದಿಗೆ ಸ್ವಲ್ಪ ಮಾಶ್ಚುರೈಸರ್ ಅಥವಾ ಲೋಶನ್ ನ್ನು ಮಿಶ್ರಣ ಮಾಡಿ ಹಚ್ಚಿಕೊಳ್ಳಬಹುದು. ಬಾದಾಮಿ ಎಣ್ಣೆಯನ್ನು ರಾತ್ರಿ ಹಚ್ಚಿ ಮಲಗಿದರೆ, ಬೆಳಿಗ್ಗೆ ಚರ್ಮ ಒಣಗುವುದಿಲ್ಲ. ಕಾಂತಿಯುತವಾಗಿರುತ್ತದೆ. ಇದು ಡಿ ಜೀವಸತ್ವ ಹೊಂದಿದ್ದು, ಚರ್ಮವನ್ನು ಆರೋಗ್ಯಕರವಾಗಿಡುತ್ತದೆ. ಆದರೆ ಅಲರ್ಜಿ ಇರುವವರು ಇದನ್ನು ಬಳಸದಿರುವುದು ಒಳ್ಳೆಯದು. ದ್ರಾಕ್ಷಿ ಬೀಜದ ಎಣ್ಣೆ ಇದು ವಿಟಮಿನ್ ಇ ಅಂಶವನ್ನು ಹೊಂದಿದ್ದು, ಪೋಷಣೆಯನ್ನು ಒದಗಿಸುವ ಮೂಲಕ ಚರ್ಮವನ್ನು ಆರೋಗ್ಯಕರವಾಗಿಡುತ್ತದೆ.
ಸೋಯಾ ಎಣ್ಣೆ ಇದು ಚರ್ಮದ ತೇವಾಂಶವನ್ನು ಕಾಪಾಡುವ ಜೊತೆಗೆ ಮೃದುವಾದ ಮತ್ತು ದೀರ್ಘಕಾಲದ ಹೊಳಪನ್ನು ನೀಡುತ್ತದೆ. ಹಾಲಿನ ಕೆನೆ ಅಥವಾ ಮೊಸರಿನ ಕೆನೆಯನ್ನು ಹಚ್ಚಿ ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದಲೂ ಚರ್ಮದ ರಕ್ಷಣೆ ಮಾದಬಹುದು.
ಒಂದೆರಡು ಚಮಚ ಜೇನಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯುವುದು. ತೆಂಗಿನಕಾಯಿ ತುರಿದು ರುಬ್ಬಿ ರಸ ತೆಗೆಯಿರಿ. ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದು. ಯಥೇಚ್ಛವಾಗಿ ನೀರು ಕುಡಿಯಬೇಕು. ಸಾಕಷ್ಟು ತರಕಾರಿ, ಹಣ್ಣು ಸೇವನೆ ಇದರಿಂದ ಚರ್ಮ ತೇವಾಂಶ ಹೊಂದಲು ಸಹಕಾರಿಯಾಗುತ್ತದೆ. ಸ್ನಾನಕ್ಕೆ ಅತಿ ಬಿಸಿಯಾದ ನೀರಿಗಿಂತ ಉಗುರು ಬೆಚ್ಚಗಿನ ನೀರು ಬಳಸುವುದು. ಶುಷ್ಕತೆ ಹೆಚ್ಚಿಸದ ಸೌಮ್ಯವಾದ ಸೋಪ್ ಗಳ ಉಪಯೋಗ. ಸ್ನಾನದ ನಂತರ ಮೃದು ಬಟ್ಟೆಯಲ್ಲಿ ಮೈ ಒರೆಸಿಕೊಳ್ಳುವುದು ಹಾಗೂ ನಂತರ ಲೋಷನ್ ಹಚ್ಚಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…