ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…