ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.
1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.
2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.
3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.
ಕಿತ್ತಳೆ, ಲಿಂಬುವಿನಂತಹ ಸಿಟ್ರಸ್ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್ ಹೇಳುತ್ತಾರೆ.
4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.
5.ಚಳಿಗಾಲದಲ್ಲಿ ವಿಟಮಿನ್ ಸಪ್ಲಿಮೆಂಟ್ಸ್ ತೀರ ಅಗತ್ಯ
ವಿಟಮಿನ್ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…