ಸಾಧನೆ

ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

123
ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿರವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ  ಬಾಲಕಿಯ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.
ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ‌ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು. ಬಂಗಾರಪೇಟೆಯ  ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದ ಗಾಯಿತ್ರಿರವರು ಮೊದಲಿನಿಂದಲೂ ಸಾಮಾಜಿಕ ಕಾಳಜಿಹೊಂದಿದ್ದು  ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ