Sports

ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

34

ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ.

ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ.

ಅಮೆರಿಕದ ಶಿಕಾಗೋದಲ್ಲಿ ರೆಸ್ಟೋರೆಂಟ್ ಹೊಂದಿರುವ ಪಾಕಿಸ್ತಾನ ಮೂಲದ 63 ವರ್ಷದ ಮೊಹಮ್ಮದ್ ಬಶೀರ್, ಧೋನಿ ಅಭಿಮಾನಿಯಾಗಿದ್ದಾರೆ. 2011ರ ವಿಶ್ವಕಪ್ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ನಡುವೆ ಮೊಹಾಲಿಯಲ್ಲಿ ನಡೆದ ಸೆಮಿಫೈನಲ್ ಪಂದ್ಯಕ್ಕೆ ಮೊಹಮ್ಮದ್ ಬಶೀರ್ ಭಾರತಕ್ಕೆ ಆಗಮಿಸಿದ್ದರು. ಆಗಲೂ ಧೋನಿ ಟಿಕೆಟ್ ಖರೀದಿಸಿ ಕೊಟ್ಟಿದ್ದರು.ಧೋನಿ ಮತ್ತು ಬಶೀರ್ ಅವರ ನಡುವೆ ಸ್ನೇಹ ಮುಂದುವರೆದಿದ್ದು, ಪಂದ್ಯ ವೀಕ್ಷಿಸಲು ಬಶೀರ್ ಇಂಗ್ಲೆಂಡ್‍ಗೆ ಆಗಮಿಸಿದ್ದಾರೆ.

ಧೋನಿ ತುಂಬಾ ಒಳ್ಳೆಯ ವ್ಯಕ್ತಿ ಅವರೊಂದಿಗೆ 9 ವರ್ಷಗಳಿಂದ ಸ್ನೇಹವಿದೆ. ಈ ಪಂದ್ಯದ ಟಿಕೆಟ್‍ಗಾಗಿ ಜನರು 800-900 ಪೌಂಡ್ ನೀಡಲು ತಯಾರಾಗಿದ್ದಾರೆ. ನಾನು ಈ 800-900 ಪೌಂಡ್ ನಲ್ಲಿ ಮತ್ತೆ ಚಿಕಾಗೋಗೆ ವಾಪಸ್ ಹೋಗಬಹುದು. ಆದರೆ ನಾನು ಟಿಕೆಟ್‍ಗಾಗಿ ಹೆಣಗಾಡಬೇಕಾಗಿಲ್ಲ ನನಗೆ ಧೋನಿ ಅವರು ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದಾರೆ.ಇದೇ ವೇಳೆ ಬಶೀರ್ ಪಾಕಿಸ್ತಾನ ತಂಡ ತಂಗಿರುವ ಹೋಟೆಲ್‍ಗೆ ತೆರಳಿ ಶೋಯಬ್ ಮಲ್ಲಿಕ್ ಮತ್ತು ಅವರ ಪತ್ನಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಭೇಟಿಯಾಗಿದ್ದಾರೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…