ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು ನಡೆಸಿದ ಹಲವು ಸಂಶೋಧನೆಗಳು ಈ ಬಗ್ಗೆ ಸತ್ಯ ಹೇಳಿದೆ. ಹಾಗಾದರೆ ಅಳುವುದರಿಂದ ದೇಹದಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಅಳುವುದರಿಂದ ಈ ಐದು ಅರೋಗ್ಯ ಸಮಸ್ಯೆಯನ್ನು ದೂರಮಾಡಬಹುದು ಎಂದು ಈ ಅಧ್ಯಯನ ತಿಳಿಸಿದೆ, ಸಮಾಜವು ಸಾಮಾನ್ಯವಾಗಿ ಅಳುವುದನ್ನು ದೌರ್ಬಲ್ಯದ ಸಂಕೇತವಾಗಿ ನೋಡುತ್ತದೆ ಆದರೆ ನೀವು ಅಳಬೇಕು ಎಂದು ನಿಮಗೆ ಅನಿಸಿದರೆ ನಿಮ್ಮ ಕಣ್ಣೀರನ್ನು ತಡೆಹಿಡಿಯಬೇಡಿ ಮತ್ತು ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಳುವಿನ ಈ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಚ್ಚು ಸ್ಟ್ರೆಸ್ ಅಥವಾ ಒತ್ತಡದ ಸಂದರ್ಭದಲ್ಲಿ ಅಳುವುದು ಬಹಳ ಒಳ್ಳೆಯು ಎನ್ನಬಹುದು, ಒತ್ತಡದ ಸಂದರ್ಭದಲ್ಲಿ ಕಣ್ಣೀರು ಸುರಿಸುವುದರಿಂದ ರಿಲ್ಯಾಕ್ಸ್ ಆಗಬಹುದು ಎಂದು ಸಂಶೋಧನೆ ತಿಳಿಸಿದೆ ಮತ್ತು ಆ ಕ್ಷಣಕ್ಕೆ ಇದರ ಪರಿಣಾಮ ತಿಳಿಯದಿದ್ದರೂ ಸ್ವಲ್ಪ ಸಮಯದ ನಂತರ ದೇಹ ವಿಶ್ರಾಂತಿ ಪಡೆಯಲು ಅಳು ಸಹಕಾರಿ.

ಸಂಶೋಧಕರ ಪ್ರಕಾರ ಅಳುವುದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು (ಪಿಎನ್ಎಸ್) ಸಕ್ರಿಯಗೊಳಿಸುತ್ತದೆ, ಸಕ್ರಿಯಗೊಳಿಸಿದಾಗ ಪಿಎನ್ಎಸ್ ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಎರಡನೆಯದಾಗಿ ಅಧಿಕ ರಕ್ತದೊತ್ತಡವು ಪಾರ್ಶ್ವವಾಯು, ಹೃದಯಾಘಾತ, ಹೃದಯ ವೈಫಲ್ಯ, ಬುದ್ಧಿಮಾಂದ್ಯತೆ ಮತ್ತು ಮೂತ್ರಪಿಂಡದ ವೈಫಲ್ಯದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಆದರೆ ಒಳ್ಳೆಯ ಸುದ್ದಿ ಏನೆಂದರೆ ಹಲವಾರು ಅಧ್ಯಯನಗಳ ಪ್ರಕಾರ, ಅಳುವುದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಳುವುದು ನಾಡಿಯನ್ನು ಸ್ಥಿರಗೊಳಿಸುತ್ತದೆ. ಮೂರನೆಯದಾಗಿ ಸಂಶೋಧನೆಗಳ ಪ್ರಕಾರ ಭಾವನಾತ್ಮಕವಾಗಿ ಬರುವಂತಹ ಕಣ್ಣೀರಿನಲ್ಲಿ ಕೆಲವೊಂದು ವಿಷಕಾರಿ ಅಂಶಗಳು ಇರುತ್ತದೆ ಇದರಿಂದ ಅಳು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ.

ಇಷ್ಟೇ ಅಲ್ಲದೆ ಅಳುವಾಗ ನಿಮ್ಮ ಕಣ್ಣಿನಿಂದ ಹರಿಯುವ ಕಣ್ಣೀರು ಕಣ್ಣುಗಳಿಂದ ಹೊಗೆ ಮತ್ತು ಧೂಳಿನಂತಹ ಅಂಶಗಳನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹಗುರವಾದ ಮನಸ್ಥಿತಿ ಉಂಟಾಗುತ್ತದೆ. ನಾಲ್ಕನೆಯದಾಗಿ ಅಳುವುದರಿಂದ ಸಿಗುವ ಮತ್ತೊಂದು ಉಪಯೋಗ ಎಂದರೆ ಅಳುವ ಮತ್ತೊಂದು ಆರೋಗ್ಯ ಲಾಭವೆಂದರೆ ಅದು ಕಣ್ಣಿಗೆ ತೇವಾಂಶವನ್ನು ನೀಡುತ್ತದೆ, ಅಳುವುದರಿಂದ ಕಣ್ಣು ಒಣಗುವುದು, ಕೆಂಪಾಗುವುದು ಮತ್ತು ತುರಿಕೆಯನ್ನು ತಡೆಯುವಲ್ಲಿ ಸಹಕರಿಸುತ್ತದೆ. ಕೊನೆಯದಾಗಿ ನೋವನ್ನು ಕಡಿಮೆ ಮಾಡಲು ಅಳು ಸಹಕಾರಿ ಎಂದು ಸಂಶೋಧನೆ ಹೇಳುತ್ತದೆ, ನಾವು ದೈಹಿಕವಾಗಿ ನೋವಲ್ಲಿದ್ದಾಗ ಕೂಡ ಕೆಲವೊಮ್ಮೆ ಕಣ್ಣೀರು ಹೊರಬರುತ್ತದೆ ಮತ್ತು ನೋವು ಸಂವೇದನೆಯನ್ನು ಕಡಿಮೆ ಮಾಡುವ ದೇಹದ ವಿಧಾನ ಇದು. ಹೀಗೆ ಅಳುವುದಂದ ಕಣ್ಣೀರು ಸುರಿಸುವುದರಿಂದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಬಿಡುಗಡೆಯಾಗುತ್ತವೆ. ಇವುಗಳು ಮನಸ್ಸನ್ನು ಹಗುರಗೊಳಿಸಿ ಮನಸ್ಥಿತಿಯನ್ನು ಸುಧಾರಿಸುತ್ತದೆ, ದಯವಿಟ್ಟು ಈ ಉತ್ಮ ವಿಷಯವನ್ನು ಎಲ್ಲರಿಗು ತಿಳಿಸುವ ಜವಾಬ್ದಾರಿ ನಿಮ್ಮದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.