News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

40

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…