ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ ಕಥೆ ನ್ಯೂರಾನ್ ಸಿನಿಮಾದಲ್ಲಿದೆ. ಒಂದಷ್ಟು ಟ್ವಿಸ್ಟ್ಗಳ ಜೊತೆಗೆ ಈ ಕ್ರೈಂ ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನ ಹೇಳಲಾಗ್ತಿದೆ.. ಮೊದಲ ಪ್ರಯತ್ನದಲ್ಲೇ ಯುವ ಗಮನ ಸೆಳೆಯೋ ಸುಳಿವು ಸಿಕ್ತಿದೆ. ನ್ಯೂರಾನ್ ಸಿನಿಮಾ ಟೀಸರ್, ಟ್ರೈಲರ್ ಮತ್ತು ಸಾಂಗ್ಸ್ಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

ಕಬೀರ್ ದುಹಾನ್ ಸಿಂಗ್ ಚಿತ್ರದಲ್ಲಿ ನೆಗೆಟೀವ್ ರೋಲ್ ಪ್ಲೇ ಮಾಡಿದ್ದಾರೆ. ಆರಂಭದಿಂದ ಕೊನೆಯವರೆಗೂ ಕುತೂಹಲಭರಿತವಾಗಿ ಸಾಗುವ ಸಿನಿಮಾ ಪ್ರೇಕ್ಷಕರನ್ನ ಸೀಟಿನ ತುದಿಗೆ ತಂದು ಕೂರಿಸುವಂತಿದೆ. ಮಡಿಕೇರಿ, ಸಕಲೇಶಪುರ, ಬೆಂಗಳೂರಿನ ಸುತ್ತಾಮುತ್ತಾ ನ್ಯೂರಾನ್ ಸಿನಿಮಾ ಶೂಟಿಂಗ್ ನಡೆದಿದೆ. ಗುರುಕಿರಣ್ ಸಂಗೀತ, ಶೋಯಬ್ ಅಹಮದ್ ಛಾಯಾಗ್ರಹಣ ನ್ಯೂರಾನ್ ಚಿತ್ರಕ್ಕಿದೆ.

ವಿನಯ್ ಕುಮಾರ್ ವಿ.ಆರ್ ನಿರ್ಮಾಣದ ನ್ಯೂರಾನ್ ಸಿನಿಮಾ ಸದ್ಯ ಸೆನ್ಸಾರ್ ಅಂಗಳದಲ್ಲಿದ್ದು, ರಿಲೀಸ್ಗೆ ಸಿದ್ಧತೆ ನಡೀತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಾ. ಶಿವರಾಜ್ಕುಮಾರ್, ಶ್ರೀಮುರಳಿ ಮತ್ತು ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನವೆಂಬರ್ ಫಸ್ಟ್ ಅಥವಾ ಸೆಕೆಂಡ್ ವೀಕ್, ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…