News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ, ಸುದ್ದಿ

ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

92

ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು. 

ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.

ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್‌ಗೆ ಸವಾಲು ಹಾಕಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…