News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

356

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…