ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ರಾಜಕೀಯಕ್ಕೂ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಾವು ಟಿಕೆಟ್ ಗೆ ಕೊಟ್ಟ ಹಣದಲ್ಲಿ ಅವರು ಜೀವನ ನಡೆಸುತ್ತಿದ್ದಾರೆ. ಗೌರವದಿಂದ ಇರುವುದನ್ನು ಬಿಟ್ಟು, ನಮ್ಮ ಪಕ್ಷದ ಮತ್ತು ನಾಯಕರ ಬಗ್ಗೆ ರಾಜಕಾರಣ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಿಮ್ಮ ಅಕ್ರಮಗಳ ಜಾತಕ ಹೊರ ತರಬೇಕಾಗುತ್ತದೆ. ನಮ್ಮ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನೀವು ಮನೆಯಲ್ಲಿ ಇದ್ದರೆ ನಿಮಗೆ ಗೌರವ, ಇಲ್ಲದಿದ್ದರೆ ದೇವೇಗೌಡ ಕುಟುಂಬದ ಬಗ್ಗೆ ಮಾತನಾಡಿದರೆ ನಿಮಗೆ ತಕ್ಕ ಪಾಠ ಕಲಿಸುತ್ತೇವೆ. ಸರ್ಕಾರ ನಮ್ಮದಿದೆ. ಸುಮ್ಮಿನಿದ್ರೆ ಸರಿ. ಇಲ್ಲಾಂದ್ರೆ ನಿಮ್ಮ ಆಸ್ತಿಪಾಸ್ತಿ ಬಗ್ಗೆ ತನಿಖೆ ನಡೆಸ್ತೀವಿ. ಶೂಟಿಂಗ್ ಮಾಡ್ಕೊಂಡು ಗೌರವವಾಗಿ ಇರಿ. ರಾಜಕಾರಣದ ಬಗ್ಗೆ ಮಾತಾಡಲು ನಿಮಗೆ ಹಕ್ಕಿಲ್ಲ. ನೀವು ಭಾರತ ದೇಶವನ್ನೇ ನೋಡಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಹೇಳುವ ಮೂಲಕ ಶಾಸಕರು, ದರ್ಶನ್ ಹಾಗೂ ಯಶ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…