ಸಿನಿಮಾ, ಸುದ್ದಿ, ಸ್ಪೂರ್ತಿ

ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

63

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ.

ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು.

ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್, ಕೇಕ್, ಹಾರಕ್ಕೆ ಹಣವನ್ನು ಖರ್ಚು ಮಾಡುವ ಬದಲು ಆ ಹಣದಲ್ಲಿ ದವಸ ಧಾನ್ಯ ನೀಡುವಂತೆ ಮನವಿ ಮಾಡಿದ್ದರು. ದರ್ಶನ್ ಮಾತಿಗೆ ಬೆಲೆ ಕೊಟ್ಟು ಅಭಿಮಾನಿಗಳು ಅಕ್ಕಿ, ಬೇಳೆ ಸೇರಿದಂತೆ ಹಲವು ಪದಾರ್ಥಗಳನ್ನು ದಾನ ನೀಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ವರ್ಷವು ಕೂಡ ದರ್ಶನ್ ಅವರು ಅದೇ ರೀತಿ ಮನವಿ ಮಾಡಿಕೊಂಡಿದ್ದು, ಅಭಿಮಾನಿಗಳು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.

ದರ್ಶನ್ ಅವರು ಮನವಿ ಮಾಡಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇಂದು ಬೆಳಗ್ಗೆಯಿಂದಲೂ ಹಲವು ಅಭಿಮಾನಿಗಳು ದರ್ಶನ್ ಅವರನ್ನು ಭೇಟಿ ಮಾಡಿ ದವಸ ಧಾನ್ಯವನ್ನು ನೀಡುತ್ತಿದ್ದಾರೆ. ಅಭಿಮಾನಿಗಳು ದರ್ಶನ್ ಅವರಿಗೆ ದವಸ ಧಾನ್ಯ ನೀಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸದ್ಯ ಅಡುಗೆ ಸಾಮಾಗ್ರಿಗಳನ್ನು ನೀಡಿದ ಬಳಿಕ ಅಭಿಮಾನಿಗಳು ದರ್ಶನ್ ಅವರ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಪಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…