ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ.

ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ ಕೇಂದ್ರಗಳಾಗಿದ್ದವು.
ತಮ್ಮ ಸಾಮ್ರಾಜ್ಯದ ಶಕ್ತಿ-ಸಾಮರ್ಥ್ಯ, ಸಂಪತ್ತು-ಸಮೃದ್ಧಿ, ವೈಭವ-ವೈಭೋಗ, ವೀರತ್ವ-ಧೀರತ್ವ, ಕಲೆ-ಸಾಹಿತ್ಯ, ಸಂಗೀತ-ನೃತ್ಯ, ಸಂಸ್ಕೃತಿ-ಸಂಪನ್ನತೆ ಹೀಗೆ ಸಕಲ ವಿಧಗಳಲ್ಲೂ ತಮ್ಮ ಹಿರಿಮೆ-ಗರಿಮೆಗಳನ್ನು ತೋರ್ಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಹುಮುಖ್ಯವಾಗಿ ವಿಜಯದ ದ್ಯೋತಕವಾಗಿ ವಿಜಯದಶಮಿಯ ಈ ದಸರಾ ಮಹೋತ್ಸವವನ್ನು ವಿಜಯನಗರ ಅರಸರು ಆಚರಿಸುತ್ತಿದ್ದರು.

ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜ ಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು.

ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಅಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು.

ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲ ತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ “ಮೈಸೂರು ದಸರಾ” ಎಂದು ವಿಶ್ವವಿಖ್ಯಾತಿಯಾಯಿತು.

ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.