ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ.

ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ ಕೇಂದ್ರಗಳಾಗಿದ್ದವು.
ತಮ್ಮ ಸಾಮ್ರಾಜ್ಯದ ಶಕ್ತಿ-ಸಾಮರ್ಥ್ಯ, ಸಂಪತ್ತು-ಸಮೃದ್ಧಿ, ವೈಭವ-ವೈಭೋಗ, ವೀರತ್ವ-ಧೀರತ್ವ, ಕಲೆ-ಸಾಹಿತ್ಯ, ಸಂಗೀತ-ನೃತ್ಯ, ಸಂಸ್ಕೃತಿ-ಸಂಪನ್ನತೆ ಹೀಗೆ ಸಕಲ ವಿಧಗಳಲ್ಲೂ ತಮ್ಮ ಹಿರಿಮೆ-ಗರಿಮೆಗಳನ್ನು ತೋರ್ಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಹುಮುಖ್ಯವಾಗಿ ವಿಜಯದ ದ್ಯೋತಕವಾಗಿ ವಿಜಯದಶಮಿಯ ಈ ದಸರಾ ಮಹೋತ್ಸವವನ್ನು ವಿಜಯನಗರ ಅರಸರು ಆಚರಿಸುತ್ತಿದ್ದರು.

ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜ ಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು.

ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಅಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು.

ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲ ತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ “ಮೈಸೂರು ದಸರಾ” ಎಂದು ವಿಶ್ವವಿಖ್ಯಾತಿಯಾಯಿತು.

ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.