News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

810

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ದೇವರು-ಧರ್ಮ

    ಮಾವಿನ ತೋರಣ ಬಾಗಿಲಿಗೆ ಕಟ್ಟುವುದರ ಉದ್ದೇಶ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…