ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.