News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

88

ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ.

ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ ಬೆಂಗಳೂರು ಮೂಲದ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ದ್ರೌಪದಿ ಪಾತ್ರ ನಿರ್ವಹಿಸಲಿದ್ದಾರೆ. ಮೊದಲೇ ಹೇಳಿದಂತೆ ಈ ಚಿತ್ರದಲ್ಲಿ ದ್ರೌಪದಿಯನ್ನ ನಾಯಕಿಯನ್ನಾಗಿಸಿ ಚಿತ್ರಕಥೆ ಮಾಡಲಾಗುತ್ತದೆ.

ಮಧು ಮಂತೇನಾ ಅವರ ಜೊತೆ ದೀಪಿಕಾ ಪಡುಕೋಣೆ ಅವರು ಸಹ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದಾರೆ. ಇದಕ್ಕೂ ಮುಂಚೆ ಚಪಕ್ ಚಿತ್ರಕ್ಕೆ ದೀಪಿಕಾ ನಿರ್ಮಾಪಕಿಯಾಗಿದ್ದರು. ಈ ಸಿನಿಮಾ ಇನ್ನು ಚಿತ್ರೀಕರಣ ನಡೆಯುತ್ತಿದೆ. ಆಸಿಡ್ ದಾಳಿಗೆ ಒಳಗಾಗಿದ್ದ ಲಕ್ಷ್ಮಿ ಅಗರ್ ವಾಲ್ ಜೀವನಾಧರಿತ ಕಥೆ ಇದಾಗಿದೆ.

ಮಹಾಭಾರತ ಅಂದ್ಮೇಲೆ ಅಲ್ಲಿ ದ್ರೌಪದಿ ಮಾತ್ರ ಮುಖ್ಯವಲ್ಲ. ಧರ್ಮರಾಮ, ಭೀಮ, ಅರ್ಜುನ, ನಕುಲ, ಸಹದೇವ, ದುರ್ಯೋಧನ, ಕೃಷ್ಣ ಹೀಗೆ ಅನೇಕ ಪಾತ್ರಗಳು ಇರಲಿದೆ. ಇಂತಹ ಪ್ರಾಮುಖ್ಯತೆ ಇರುವ ಪಾತ್ರಗಳಲ್ಲಿ ಯಾವ ನಟರು ನಟಿಸಬಹುದು ಎಂಬ ಕುತೂಹಲ ಈಗ ಆರಂಭವಾಗಿದೆ.ಮಹಾಭಾರತ ಚಿತ್ರವನ್ನ ಎರಡು ಅಥವಾ ಮೂರಕ್ಕಿಂತ ಹೆಚ್ಚು ಸರಣಿ ಮಾಡುವ ನಿರೀಕ್ಷೆ ಇದೆ. ಮೊದಲ ಆವೃತ್ತಿ 2021ರ ದೀಪಾವಳಿಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಪ್ರಿ-ಪ್ರೊಡಕ್ಷನ್ ಮುಗಿದ್ಮೇಲೆ ಸಿನಿಮಾ ಶೂಟಿಂಗ್ ಆರಂಭಿಸುವ ಚಿಂತನೆ ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ