ಸುದ್ದಿ

ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

42

ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ.

2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಈ ಕಟ್ಟಡವನ್ನು ನಿರ್ಮಾಣ ಮಾಡಿತ್ತು. 5 ಕೋಟಿ ವೆಚ್ಚದಲ್ಲಿ ಆರಂಭವಾಗಿದ್ದ ಈ ಕಟ್ಟಡ, ಕಾಮಗಾರಿ ಪೂರ್ಣಗೊಂಡಾಗ 8 ಕೋಟಿ ವೆಚ್ಚ ವ್ಯಯಿಸಲಾಗಿತ್ತು. ಚಂದ್ರ ಬಾಬು ಅವರು ಈ ಕಟ್ಟಡವನ್ನು ಅವರು ಪಕ್ಷದ ಕಾರ್ಯಕರ್ತರು ಮತ್ತು ಜನರನ್ನು ಭೇಟಿಯಾಗಲು ಉಪಯೋಗಿಸುತ್ತಿದ್ದರು. ಆದರೆ ಈ ಕಟ್ಟಡ ಅಕ್ರಮವಾಗಿದ್ದರಿಂದ ಜಗನ್ ಧ್ವಂಸಗೊಳಿಸಲು ಆದೇಶ ನೀಡಿದ್ದರು.

2017ರಲ್ಲಿ ನಾಯ್ಡು ಮನೆ ಸಮೀಪದಲ್ಲೇ 8 ಕೋಟಿ ರೂ. ವೆಚ್ಚದಲ್ಲಿ ಈ ವೇದಿಕೆ ನಿರ್ಮಿಸಿದ್ದರು. ಮುಖ್ಯಮಂತ್ರಿ ಆದ ನಂತರ ಜಗನ್ ಮೊದಲ ಬಾರಿಗೆ ಪ್ರಜಾ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನೂ ನಡೆಸಿದ್ದರು. ಈ ವೇಳೆ, ಇದೇ ಕೊನೇ ಸಭೆ. ಪಾರದರ್ಶಕತೆ ನಿಟ್ಟಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಈ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಹೇಳಿದ್ದರು.

ಕೆಲ ವಾರಗಳ ಹಿಂದೆಯಷ್ಟೇ ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಸರ್ಕಾರ ವಾಪಸ್ ಪಡೆಯಲಾಗಿತ್ತು. ಇತ್ತ ಜೂನ್ 4 ರಂದು ಪ್ರಜಾ ವೇದಿಕಾ ಬಳಿ ಇರುವ ಮನೆಯಲ್ಲೇ ಇರಲು ಅವಕಾಶ ಕೊಡುವಂತೆ ನಾಯ್ಡು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಅಲ್ಲದೇ `ಪ್ರಜಾ ವೇದಿಕಾ’ ಹಾಲ್ ಅನ್ನು ಪಕ್ಷದ ಕಾರ್ಯಗಳನ್ನು ನಡೆಸಲು ಬಳಕೆ ಮಾಡಲು ನೀಡಬೇಕೆಂದು ಪತ್ರದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಜಗನ್ ಸರ್ಕಾರ ಕೃಷ್ಣ ನದಿಯ ತಟದಲ್ಲಿ ನಿರ್ಮಾಣ ಮಾಡಿರುವ ಈ ಮನೆಯೂ ಕೂಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…