ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.

ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.

ದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….