News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಪ್ರೇಮ, ಸಂಬಂಧ, ಸ್ಪೂರ್ತಿ

ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

115

ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.

ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.

ದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…