ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.

ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.

ದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…