ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.
ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.
ದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.