ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.

ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.

ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.

ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…