ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.
ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!
ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.
ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.
ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…