News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಚುನಾವಣೆ

ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

39

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ ಮೇ 20ರೊಳಗೆ ಮತದಾನ ಮತ್ತು ಮತ ಎಣಿಕೆ ಪ್ರಕ್ರಿಯೆ ಮುಗಿಯಲಿದೆ.

ಮೇ 31ರೊಳಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ. ಜೂನ್ 1ರಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗದಂತೆ ಮೇ ತಿಂಗಳೊಳಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ಯೋಜನೆಗಳನ್ನು ಹಾಕಿಕೊಂಡಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • ಸುದ್ದಿ

    ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

    ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…