ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…