ಸುದ್ದಿ

ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

65

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್‌ ಪೋರ್ಟಲ್‌ ಮೂಲಕ ಇಪಿಎಫ್‌ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್‌ ಮೂಲಕವೂ ಸಹ  ಬ್ಯಾಲನ್ಸ್‌ ಚೆಕ್‌ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್‌ಓ ಪೋರ್ಟಲ್ ಮೂಲಕ
2. ಎಸ್‌ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್‌ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.

ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್  ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್‌ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್‌ಓ ಪೋರ್ಟಲ್ ಮೂಲಕ : ಇಪಿಎಫ್‌ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್‌ ಮಾಡಲು ಮೊದಲು ನಿಮ್ಮ ಯುನಿವರ್ಸಲ್‌ ಅಕೌಂಟ್‌ ನಂಬರ್‌ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್‌ವರ್ಡ್ ದೊರೆಯುತ್ತದೆ. ಈ ಪಾಸ್‌ವರ್ಡ್‌ ಬಳಸಿ ಇಪಿಎಫ್ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಬ್ಯಾಲೆನ್ಸ್‌ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್‌ಬುಕ್ ಅನ್ನು ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್‌ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್‌ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್‌ಓM-Sewa ಹೆಸರಿನ ಸ್ಮಾರ್ಟ್‌ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…