News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

75

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್‌ ಪೋರ್ಟಲ್‌ ಮೂಲಕ ಇಪಿಎಫ್‌ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್‌ ಮೂಲಕವೂ ಸಹ  ಬ್ಯಾಲನ್ಸ್‌ ಚೆಕ್‌ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್‌ಓ ಪೋರ್ಟಲ್ ಮೂಲಕ
2. ಎಸ್‌ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್‌ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.

ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್  ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್‌ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್‌ಓ ಪೋರ್ಟಲ್ ಮೂಲಕ : ಇಪಿಎಫ್‌ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್‌ ಮಾಡಲು ಮೊದಲು ನಿಮ್ಮ ಯುನಿವರ್ಸಲ್‌ ಅಕೌಂಟ್‌ ನಂಬರ್‌ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್‌ವರ್ಡ್ ದೊರೆಯುತ್ತದೆ. ಈ ಪಾಸ್‌ವರ್ಡ್‌ ಬಳಸಿ ಇಪಿಎಫ್ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಬ್ಯಾಲೆನ್ಸ್‌ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್‌ಬುಕ್ ಅನ್ನು ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್‌ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್‌ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್‌ಓM-Sewa ಹೆಸರಿನ ಸ್ಮಾರ್ಟ್‌ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.