News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

78

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್‌ ಪೋರ್ಟಲ್‌ ಮೂಲಕ ಇಪಿಎಫ್‌ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್‌ ಮೂಲಕವೂ ಸಹ  ಬ್ಯಾಲನ್ಸ್‌ ಚೆಕ್‌ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್‌ಓ ಪೋರ್ಟಲ್ ಮೂಲಕ
2. ಎಸ್‌ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್‌ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.

ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್  ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್‌ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್‌ಓ ಪೋರ್ಟಲ್ ಮೂಲಕ : ಇಪಿಎಫ್‌ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್‌ ಮಾಡಲು ಮೊದಲು ನಿಮ್ಮ ಯುನಿವರ್ಸಲ್‌ ಅಕೌಂಟ್‌ ನಂಬರ್‌ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್‌ವರ್ಡ್ ದೊರೆಯುತ್ತದೆ. ಈ ಪಾಸ್‌ವರ್ಡ್‌ ಬಳಸಿ ಇಪಿಎಫ್ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಬ್ಯಾಲೆನ್ಸ್‌ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್‌ಬುಕ್ ಅನ್ನು ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್‌ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್‌ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್‌ಓM-Sewa ಹೆಸರಿನ ಸ್ಮಾರ್ಟ್‌ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…