ಸುದ್ದಿ

ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

69

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್‌ ಪೋರ್ಟಲ್‌ ಮೂಲಕ ಇಪಿಎಫ್‌ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್‌ ಮೂಲಕವೂ ಸಹ  ಬ್ಯಾಲನ್ಸ್‌ ಚೆಕ್‌ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್‌ಓ ಪೋರ್ಟಲ್ ಮೂಲಕ
2. ಎಸ್‌ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್‌ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.

ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್  ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್‌ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್‌ಓ ಪೋರ್ಟಲ್ ಮೂಲಕ : ಇಪಿಎಫ್‌ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್‌ ಮಾಡಲು ಮೊದಲು ನಿಮ್ಮ ಯುನಿವರ್ಸಲ್‌ ಅಕೌಂಟ್‌ ನಂಬರ್‌ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್‌ವರ್ಡ್ ದೊರೆಯುತ್ತದೆ. ಈ ಪಾಸ್‌ವರ್ಡ್‌ ಬಳಸಿ ಇಪಿಎಫ್ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಬ್ಯಾಲೆನ್ಸ್‌ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್‌ಬುಕ್ ಅನ್ನು ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್‌ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್‌ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್‌ಓM-Sewa ಹೆಸರಿನ ಸ್ಮಾರ್ಟ್‌ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.