ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…