ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.

ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.