News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

124

ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್‌ ಮೂಲಕ ಬ್ಯಾಂಕ್‌ ಅಕೌಂಟ್‌ಗೆ ನೇರವಾಗಿ ಪಿಎಫ್‌ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್‌ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್‌ 19, ಫಾರ್ಮ್‌ 10C ಮತ್ತು ಫಾರ್ಮ್‌ 31ನ್ನು ಸೇರಿಸಿ ಒಂದೇ ಕ್ಲೇಮ್‌ ಫಾರ್ಮ್‌ನ್ನು ಇಪಿಎಫ್‌ಒ ರೂಪಿಸಿದೆ. ಹಾಗಾದ್ರೆ, ಪಿಎಫ್‌ ಹಣವನ್ನು ಆನ್‌ಲೈನ್‌ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್‌ ನಂಬರ್‌ ಮತ್ತು ಪಿಎಫ್ ಖಾತೆ ಇಪಿಎಫ್‌ಒ ವೆಬ್‌ಸೈಟ್‌ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್‌ಸೈಟ್‌ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್‌, ಆಧಾರ್ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನಮೂದಿಸಬೇಕು.ವೆಬ್‌ಸೈಟ್‌ಗೆ ಭೇಟಿ ನೀಡಿ ಮೊದಲು ಯುನಿಫೈಡ್‌ ಮೆಂಬರ್ ಪೋರ್ಟಾಲ್‌ ವೆಬ್‌ಸೈಟ್‌ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್‌ನಲ್ಲಿ ಲಿಂಕ್‌ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್‌ ಸಂಖ್ಯೆ ಮತ್ತು ಪಾಸ್‌ವರ್ಡ್‌ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್‌ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್‌ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್‌ಸೈಟ್‌ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್‌ಸೈಟ್‌ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್‌ಸೈಟ್‌ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್‌ಸೈಟ್‌ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್‌ಲೈನ್‌ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್‌ನಲ್ಲಿರುವ ‘ಆನ್‌ಲೈನ್‌ ಸರ್ವಿಸಸ್’ ಲಿಂಕ್‌ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್‌ (ಫಾರ್ಮ್‌ 19, ಫಾರ್ಮ್‌ 10C ಮತ್ತು ಫಾರ್ಮ್‌ 31) ಆಯ್ಕೆಯನ್ನು ಆಯ್ದುಕೊಳ್ಳಿ.

ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್‌ ಅಕೌಂಟ್‌ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್‌ ಕ್ಲಿಕ್ ಮಾಡಿ.

ಆನ್‌ಲೈನ್‌ ಕ್ಲೇಮ್‌ಗೆ ಮುಂದುವರೆಯಿರಿ ಬ್ಯಾಂಕ್‌ ಅಕೌಂಟ್‌ ಪರಿಶೀಲನೆಯಾದ ನಂತರ, ಆನ್‌ಲೈನ್‌ ಕ್ಲೇಮ್‌ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್‌ ಡೌನ್‌ ಮಾಡಿ ‘ಪ್ರೊಸೀಡ್ ಫಾರ್‌ ಆನ್‌ಲೈನ್‌ ಕ್ಲೇಮ್‌’ ಬಟನ್‌ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್‌ ವಿತ್‌ಡ್ರಾ ಫಾರ್ಮ್‌’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್‌ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.

ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್‌ನ ಸ್ಟೇಟಸ್‌ ಕೂಡ ನೋಡಬಹುದಾಗಿದ್ದು, ಆನ್‌ಲೈನ್‌ ಸರ್ವಿಸಸ್ ವಿಭಾಗದಲ್ಲಿ ಚೆಕ್‌ ಕ್ಲೇಮ್‌ ಸ್ಟೇಟಸ್‌ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್‌ ಕ್ಲೇಮ್‌ ಸ್ಟೇಟಸ್‌ ಪರಿಶೀಲಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…