ಸುದ್ದಿ

ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

123

ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್‌ ಮೂಲಕ ಬ್ಯಾಂಕ್‌ ಅಕೌಂಟ್‌ಗೆ ನೇರವಾಗಿ ಪಿಎಫ್‌ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್‌ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್‌ 19, ಫಾರ್ಮ್‌ 10C ಮತ್ತು ಫಾರ್ಮ್‌ 31ನ್ನು ಸೇರಿಸಿ ಒಂದೇ ಕ್ಲೇಮ್‌ ಫಾರ್ಮ್‌ನ್ನು ಇಪಿಎಫ್‌ಒ ರೂಪಿಸಿದೆ. ಹಾಗಾದ್ರೆ, ಪಿಎಫ್‌ ಹಣವನ್ನು ಆನ್‌ಲೈನ್‌ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್‌ ನಂಬರ್‌ ಮತ್ತು ಪಿಎಫ್ ಖಾತೆ ಇಪಿಎಫ್‌ಒ ವೆಬ್‌ಸೈಟ್‌ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್‌ಸೈಟ್‌ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್‌, ಆಧಾರ್ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನಮೂದಿಸಬೇಕು.ವೆಬ್‌ಸೈಟ್‌ಗೆ ಭೇಟಿ ನೀಡಿ ಮೊದಲು ಯುನಿಫೈಡ್‌ ಮೆಂಬರ್ ಪೋರ್ಟಾಲ್‌ ವೆಬ್‌ಸೈಟ್‌ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್‌ನಲ್ಲಿ ಲಿಂಕ್‌ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್‌ ಸಂಖ್ಯೆ ಮತ್ತು ಪಾಸ್‌ವರ್ಡ್‌ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್‌ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್‌ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್‌ಸೈಟ್‌ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್‌ಸೈಟ್‌ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್‌ಸೈಟ್‌ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್‌ಸೈಟ್‌ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್‌ಲೈನ್‌ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್‌ನಲ್ಲಿರುವ ‘ಆನ್‌ಲೈನ್‌ ಸರ್ವಿಸಸ್’ ಲಿಂಕ್‌ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್‌ (ಫಾರ್ಮ್‌ 19, ಫಾರ್ಮ್‌ 10C ಮತ್ತು ಫಾರ್ಮ್‌ 31) ಆಯ್ಕೆಯನ್ನು ಆಯ್ದುಕೊಳ್ಳಿ.

ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್‌ ಅಕೌಂಟ್‌ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್‌ ಕ್ಲಿಕ್ ಮಾಡಿ.

ಆನ್‌ಲೈನ್‌ ಕ್ಲೇಮ್‌ಗೆ ಮುಂದುವರೆಯಿರಿ ಬ್ಯಾಂಕ್‌ ಅಕೌಂಟ್‌ ಪರಿಶೀಲನೆಯಾದ ನಂತರ, ಆನ್‌ಲೈನ್‌ ಕ್ಲೇಮ್‌ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್‌ ಡೌನ್‌ ಮಾಡಿ ‘ಪ್ರೊಸೀಡ್ ಫಾರ್‌ ಆನ್‌ಲೈನ್‌ ಕ್ಲೇಮ್‌’ ಬಟನ್‌ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್‌ ವಿತ್‌ಡ್ರಾ ಫಾರ್ಮ್‌’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್‌ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.

ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್‌ನ ಸ್ಟೇಟಸ್‌ ಕೂಡ ನೋಡಬಹುದಾಗಿದ್ದು, ಆನ್‌ಲೈನ್‌ ಸರ್ವಿಸಸ್ ವಿಭಾಗದಲ್ಲಿ ಚೆಕ್‌ ಕ್ಲೇಮ್‌ ಸ್ಟೇಟಸ್‌ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್‌ ಕ್ಲೇಮ್‌ ಸ್ಟೇಟಸ್‌ ಪರಿಶೀಲಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…