News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

124

ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್‌ ಮೂಲಕ ಬ್ಯಾಂಕ್‌ ಅಕೌಂಟ್‌ಗೆ ನೇರವಾಗಿ ಪಿಎಫ್‌ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್‌ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್‌ 19, ಫಾರ್ಮ್‌ 10C ಮತ್ತು ಫಾರ್ಮ್‌ 31ನ್ನು ಸೇರಿಸಿ ಒಂದೇ ಕ್ಲೇಮ್‌ ಫಾರ್ಮ್‌ನ್ನು ಇಪಿಎಫ್‌ಒ ರೂಪಿಸಿದೆ. ಹಾಗಾದ್ರೆ, ಪಿಎಫ್‌ ಹಣವನ್ನು ಆನ್‌ಲೈನ್‌ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್‌ ನಂಬರ್‌ ಮತ್ತು ಪಿಎಫ್ ಖಾತೆ ಇಪಿಎಫ್‌ಒ ವೆಬ್‌ಸೈಟ್‌ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್‌ಸೈಟ್‌ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್‌, ಆಧಾರ್ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನಮೂದಿಸಬೇಕು.ವೆಬ್‌ಸೈಟ್‌ಗೆ ಭೇಟಿ ನೀಡಿ ಮೊದಲು ಯುನಿಫೈಡ್‌ ಮೆಂಬರ್ ಪೋರ್ಟಾಲ್‌ ವೆಬ್‌ಸೈಟ್‌ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್‌ನಲ್ಲಿ ಲಿಂಕ್‌ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್‌ ಸಂಖ್ಯೆ ಮತ್ತು ಪಾಸ್‌ವರ್ಡ್‌ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್‌ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್‌ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್‌ಸೈಟ್‌ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್‌ಸೈಟ್‌ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್‌ಸೈಟ್‌ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್‌ಸೈಟ್‌ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್‌ಲೈನ್‌ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್‌ನಲ್ಲಿರುವ ‘ಆನ್‌ಲೈನ್‌ ಸರ್ವಿಸಸ್’ ಲಿಂಕ್‌ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್‌ (ಫಾರ್ಮ್‌ 19, ಫಾರ್ಮ್‌ 10C ಮತ್ತು ಫಾರ್ಮ್‌ 31) ಆಯ್ಕೆಯನ್ನು ಆಯ್ದುಕೊಳ್ಳಿ.

ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್‌ ಅಕೌಂಟ್‌ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್‌ ಕ್ಲಿಕ್ ಮಾಡಿ.

ಆನ್‌ಲೈನ್‌ ಕ್ಲೇಮ್‌ಗೆ ಮುಂದುವರೆಯಿರಿ ಬ್ಯಾಂಕ್‌ ಅಕೌಂಟ್‌ ಪರಿಶೀಲನೆಯಾದ ನಂತರ, ಆನ್‌ಲೈನ್‌ ಕ್ಲೇಮ್‌ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್‌ ಡೌನ್‌ ಮಾಡಿ ‘ಪ್ರೊಸೀಡ್ ಫಾರ್‌ ಆನ್‌ಲೈನ್‌ ಕ್ಲೇಮ್‌’ ಬಟನ್‌ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್‌ ವಿತ್‌ಡ್ರಾ ಫಾರ್ಮ್‌’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್‌ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.

ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್‌ನ ಸ್ಟೇಟಸ್‌ ಕೂಡ ನೋಡಬಹುದಾಗಿದ್ದು, ಆನ್‌ಲೈನ್‌ ಸರ್ವಿಸಸ್ ವಿಭಾಗದಲ್ಲಿ ಚೆಕ್‌ ಕ್ಲೇಮ್‌ ಸ್ಟೇಟಸ್‌ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್‌ ಕ್ಲೇಮ್‌ ಸ್ಟೇಟಸ್‌ ಪರಿಶೀಲಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.