ಆರೋಗ್ಯ

ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

139

ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.

ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್​ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್​ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್​ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್​ನಟ್, ಶೇಂಗಾ ಇವು ನಟ್ಸ್​ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.

ಆಹಾರದಲ್ಲಿ ಸಲಾಡ್​ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್​ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್​ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್​ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.

ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.