ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…