ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…