News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

118

ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್‌ ಲೋನ್‌ ಅನ್ನು ರೀಸ್ಟಕ್ಚರ್‌x ಲೋನ್‌ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್‌ ಲೋನ್‌ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್‌.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್‌ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್‌ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫ‌ಜಲಪುರ ತಾಲೂಕು, ಜುಲೈ 5ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…