News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

117

ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್‌ ಲೋನ್‌ ಅನ್ನು ರೀಸ್ಟಕ್ಚರ್‌x ಲೋನ್‌ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್‌ ಲೋನ್‌ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್‌.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್‌ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್‌ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫ‌ಜಲಪುರ ತಾಲೂಕು, ಜುಲೈ 5ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…