ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…