ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.

ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.

ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.

ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.
ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.

ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.