ಸುದ್ದಿ, ಸ್ಪೂರ್ತಿ

ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

195

ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.

ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ  ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.

ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.

ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.

ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.

ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.