ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.
ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.
ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.
ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.
ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.
ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…